ಮುಲ್ಕಿ: ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ. ಪ್ರಕೃತಿ ನಾಶವಾಗಿದ್ದರ ಫಲವೇ ಇಂದಿನ ಹವಾಮಾನ ವೈಪರೀತ್ಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಸಸಿಹಿತ್ಲು ರಂಗ ಸುದರ್ಶನ ಅಶ್ರಯದಲ್ಲಿ ಆಯೋಜಿಸಲಾದ ಬಿಸುರಂಗ ಪರ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗಕ್ಕೆ ಕರಾವಳಿಯ ತುಳುವರ ಹೊಸ ವರ್ಷ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಕಾರ್ಯವಾಗಬೇಕು ಎಂದರು.
ಸಸಿಹಿತ್ಲು ಭಗವತಿ ದೇವಸ್ಥಾನದ ಅನುವಂಶಿಕ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನೆಲದ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಎಳೆಯರಿಗೆ ತಿಳಿಸುವ ಕಾರ್ಯ ನಡೆಯಬೇಕು. ವೈಜ್ಞಾನಿಕ ಸತ್ವದ ಸಹಿತ ಆಚರಣೆಯ ಮಹತ್ವಗಳನ್ನು ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು. ಗುಜರಾತಿನ ಹೋಟೆಲ್ ಉದ್ಯಮಿ ಸುವಾಸಿನಿ ನಾಯ್ಕ್ ಬಿಸು ಕಣಿ ಇಟ್ಟು ಜಾನಪದೀಯವಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸೇವೆಯಲ್ಲಿ ಐವತ್ತು ವರ್ಷ ಪೂರೈಸಿದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯ ಮತ್ತು ಸಾಧಕ ಭಾಸ್ಕರ ಸುವರ್ಣ ಸಸಿಹಿತ್ತು ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಮಂಗಳೂರಿನ ಯೋಜಕ ಇಂಡಿಯದ ಆಡಳಿತ ನಿರ್ದೇಶಕ ಜಗದೀಶ ಬೋಳೂರು ಮತ್ತು ಹಳೆಯಂಗಡಿ ಪಿ.ಸಿ.ಎ. ಬ್ಯಾಂಕಿನ ಕಾರ್ಯನಿರ್ವಾಹಕ అధిಕಾరి ಹಿಮಕರ ಸುವರ್ಣ, ಬಜ್ಜೆ ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು , ಗ್ರೀಷ್ಮ ಕಟೀಲು ರಂಗ ಸುದರ್ಶನ ಸಂಸ್ಥೆಯ ನಿರ್ದೇಶಕ ಪರಮಾನಂದ ವಿ. ಸಾಲಿಯಾನ್ , ರಾಜೇಂದ್ರ ಕುಮಾರ್ ಎಕ್ಕಾರು,ಉಪನ್ಯಾಸಕ ಎಸ್.ಆರ್. ಪ್ರಭಾತ್, ಎಸ್.ಆರ್. ಪ್ರದೀಪ್, ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಡೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…