ಮುಲ್ಕಿ: ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ. ಪ್ರಕೃತಿ ನಾಶವಾಗಿದ್ದರ ಫಲವೇ ಇಂದಿನ ಹವಾಮಾನ ವೈಪರೀತ್ಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಸಸಿಹಿತ್ಲು ರಂಗ ಸುದರ್ಶನ ಅಶ್ರಯದಲ್ಲಿ ಆಯೋಜಿಸಲಾದ ಬಿಸುರಂಗ ಪರ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗಕ್ಕೆ ಕರಾವಳಿಯ ತುಳುವರ ಹೊಸ ವರ್ಷ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಕಾರ್ಯವಾಗಬೇಕು ಎಂದರು.
ಸಸಿಹಿತ್ಲು ಭಗವತಿ ದೇವಸ್ಥಾನದ ಅನುವಂಶಿಕ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನೆಲದ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಎಳೆಯರಿಗೆ ತಿಳಿಸುವ ಕಾರ್ಯ ನಡೆಯಬೇಕು. ವೈಜ್ಞಾನಿಕ ಸತ್ವದ ಸಹಿತ ಆಚರಣೆಯ ಮಹತ್ವಗಳನ್ನು ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು. ಗುಜರಾತಿನ ಹೋಟೆಲ್ ಉದ್ಯಮಿ ಸುವಾಸಿನಿ ನಾಯ್ಕ್ ಬಿಸು ಕಣಿ ಇಟ್ಟು ಜಾನಪದೀಯವಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸೇವೆಯಲ್ಲಿ ಐವತ್ತು ವರ್ಷ ಪೂರೈಸಿದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯ ಮತ್ತು ಸಾಧಕ ಭಾಸ್ಕರ ಸುವರ್ಣ ಸಸಿಹಿತ್ತು ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಮಂಗಳೂರಿನ ಯೋಜಕ ಇಂಡಿಯದ ಆಡಳಿತ ನಿರ್ದೇಶಕ ಜಗದೀಶ ಬೋಳೂರು ಮತ್ತು ಹಳೆಯಂಗಡಿ ಪಿ.ಸಿ.ಎ. ಬ್ಯಾಂಕಿನ ಕಾರ್ಯನಿರ್ವಾಹಕ అధిಕಾరి ಹಿಮಕರ ಸುವರ್ಣ, ಬಜ್ಜೆ ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು , ಗ್ರೀಷ್ಮ ಕಟೀಲು ರಂಗ ಸುದರ್ಶನ ಸಂಸ್ಥೆಯ ನಿರ್ದೇಶಕ ಪರಮಾನಂದ ವಿ. ಸಾಲಿಯಾನ್ , ರಾಜೇಂದ್ರ ಕುಮಾರ್ ಎಕ್ಕಾರು,ಉಪನ್ಯಾಸಕ ಎಸ್.ಆರ್. ಪ್ರಭಾತ್, ಎಸ್.ಆರ್. ಪ್ರದೀಪ್, ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಡೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…