ಮುಲ್ಕಿ: ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ. ಪ್ರಕೃತಿ ನಾಶವಾಗಿದ್ದರ ಫಲವೇ ಇಂದಿನ ಹವಾಮಾನ ವೈಪರೀತ್ಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಸಸಿಹಿತ್ಲು ರಂಗ ಸುದರ್ಶನ ಅಶ್ರಯದಲ್ಲಿ ಆಯೋಜಿಸಲಾದ ಬಿಸುರಂಗ ಪರ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗಕ್ಕೆ ಕರಾವಳಿಯ ತುಳುವರ ಹೊಸ ವರ್ಷ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಕಾರ್ಯವಾಗಬೇಕು ಎಂದರು.
ಸಸಿಹಿತ್ಲು ಭಗವತಿ ದೇವಸ್ಥಾನದ ಅನುವಂಶಿಕ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನೆಲದ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಎಳೆಯರಿಗೆ ತಿಳಿಸುವ ಕಾರ್ಯ ನಡೆಯಬೇಕು. ವೈಜ್ಞಾನಿಕ ಸತ್ವದ ಸಹಿತ ಆಚರಣೆಯ ಮಹತ್ವಗಳನ್ನು ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು. ಗುಜರಾತಿನ ಹೋಟೆಲ್ ಉದ್ಯಮಿ ಸುವಾಸಿನಿ ನಾಯ್ಕ್ ಬಿಸು ಕಣಿ ಇಟ್ಟು ಜಾನಪದೀಯವಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸೇವೆಯಲ್ಲಿ ಐವತ್ತು ವರ್ಷ ಪೂರೈಸಿದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯ ಮತ್ತು ಸಾಧಕ ಭಾಸ್ಕರ ಸುವರ್ಣ ಸಸಿಹಿತ್ತು ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಮಂಗಳೂರಿನ ಯೋಜಕ ಇಂಡಿಯದ ಆಡಳಿತ ನಿರ್ದೇಶಕ ಜಗದೀಶ ಬೋಳೂರು ಮತ್ತು ಹಳೆಯಂಗಡಿ ಪಿ.ಸಿ.ಎ. ಬ್ಯಾಂಕಿನ ಕಾರ್ಯನಿರ್ವಾಹಕ అధిಕಾరి ಹಿಮಕರ ಸುವರ್ಣ, ಬಜ್ಜೆ ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು , ಗ್ರೀಷ್ಮ ಕಟೀಲು ರಂಗ ಸುದರ್ಶನ ಸಂಸ್ಥೆಯ ನಿರ್ದೇಶಕ ಪರಮಾನಂದ ವಿ. ಸಾಲಿಯಾನ್ , ರಾಜೇಂದ್ರ ಕುಮಾರ್ ಎಕ್ಕಾರು,ಉಪನ್ಯಾಸಕ ಎಸ್.ಆರ್. ಪ್ರಭಾತ್, ಎಸ್.ಆರ್. ಪ್ರದೀಪ್, ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಡೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…