ಇತರೆ

ಕಡಬ: ಶ್ರೀ ದುರ್ಗಾಂಬಿಕಾ ದೇಗುಲ ಸಂಭ್ರಮದ ಏಕಾಹ ಭಜನ ಮಹೋತ್ಸವ

ಕಡಬ, ಎ. 13: ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವ ಸ್ಥಾನದಲ್ಲಿ 63ನೇ ವರ್ಷದ ಏಕಾಹ ಭಜನ ಮಹೋತ್ಸವವು ಶುಕ್ರವಾರ ಮುಂಜಾನೆ ಆರಂಭಗೊಂಡು ಶನಿವಾರ ಬೆಳಿಗ್ಗೆ ವರೆಗೆ ನಡೆಯಿತು.

ದೇಗುಲದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಕೆದಿಲಾಯ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನೆಗೆ ಚಾಲನೆ ನೀಡಿದರು.
ಅ ಬಳಿಕ ಕಡಬ ದುರ್ಗಾಂಬಿಕಾ ಭಜನ
ಮಂಡಳಿಯ ಸದಸ್ಯರು ಭಜನ ಸೇವೆ ನೆರವೇರಿಸಿದರು. ಬಳಿಕ ವಿವಿಧ ಭಜನ ಸಂಘಗಳ ಸದಸ್ಯರಿಂದ ಭಜನ ಸೇವೆ ನಡೆಯಿತು. ಸಂಜೆ ದುರ್ಗಾಪೂಜೆ ನೆರವೇರಿತು. ರಾತ್ರಿ ಜರಗಿದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀಗಳನ್ನು ಗಣಪತಿ ದೇವಸ್ಥಾನದಿಂದ ಪೂರ್ಣಕುಂಭ ಸ್ವಾಗತದ ಮೂಲಕ ಮೆರವಣಿಗೆಯಲ್ಲಿ ಕರೆತರಲಾಯಿತು. ಬಳಿಕ ಶ್ರೀ ದೇವರಿಗೆ ಉಲ್ಪೆ ಸಮರ್ಪಣೆ ನಡೆಯಿತು.

ದೈವಜ್ಞ ಸುಬ್ರಹ್ಮಣ್ಯ ಬೈಪಾಡಿತ್ತಾಯ ಕೆಂಚಭಟ್ರೆ, ದೇವಸ್ಥಾನದ ಅರ್ಚಕ ಪ್ರಶಾಂತ ಕೆದಿಲಾಯ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಜನಾರ್ದನ ಗೌಡ ಪಣೆಮಜಲು, ಸೀತಾರಾಮ್ ಗೌಡ ಪೊಸವಳಿಕೆ ಡಾ|ರವೀಂದ್ರ ಮಲ್ಯ ಬ್ರಹ್ಮಕಲಶೋತ್ಸವ ಸಮಿತಿಯ ಕೃಷ್ಣ ಶೆಟ್ಟಿ ಕಡಬ, ಏಕಾಹ ಸಮಿತಿಯ ಅಧ್ಯಕ್ಷ ಕಿಶನ್ ಕುಮಾರ್ ರೈ ಪೆರಿಯಡ್ಕ ಗುತ್ತು, ಕಾರ್ಯದರ್ಶಿ ಶ್ರೀಕೃಷ್ಣ ಎಂ.ಆರ್., ಜತೆ ಕಾರ್ಯದರ್ಶಿ ರಾಕೇಶ್ ಪೆಲತ್ತೋಡಿ, ಕೋಶಾಧಿಕಾರಿ ಸೀತಾರಾಮ ಗೌಡ ಎ., ಕಡಬ ಎಸ್‌ಐ ಅಭಿನಂದನ ಎಂ.ಎಸ್., ಶ್ರೀ ದುರ್ಗಾಂಬಿಕಾ ಭಜನ ಮಂಡಳಿಯ ಅಧ್ಯಕ್ಷ ಸೋಮಪ್ಪ ನ್ಯಾಕ್, ಕಾರ್ಯದರ್ಶಿ ಮನೋಹರ ರೈ ಬೆದ್ರಾಜೆ, ಶ್ರೀ ಶ್ರೀಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ
ಸಮಿತಿ ಮಾಜಿ ಅಧ್ಯಕ್ಷ ಮುತ್ತುಕುಮಾರ್, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸತೀಶ್ ನ್ಯಾಕ್ ಮೇಲಿನಮನೆ, ಸರಸ್ವತೀ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್, ಅಧ್ಯಕ್ಷ ರವಿರಾಜ್ ಶೆಟ್ಟಿ ಧಾರ್ಮಿಕ ಉತ್ಸವ ಸಮಿತಿಯ ಅಧ್ಯಕ್ಷ ಸುಂದರ ಗೌಡ ಮಂಡೆಕರ, ಪ್ರಮುಖರಾದ ಅಶೋಕ್ ಕುಮಾರ್ ಪಿ., ಪ್ರಕಾಶ್ ಎನ್.ಕೆ., ಅಜಿತ್ ರೈ ಆರ್ತಿಲ, ಮೋನಪ್ಪ ಗೌಡ ನಾಡೋಳಿ, ವಿಶ್ವನಾಥ ರೈ ಪೆರ್ಲ, ಪ್ರಮೋದ್ ರೈ ನಂದುಗುರಿ, ಶಿವಪ್ರಸಾದ್ ರೈ ಮೈಲೇರಿ, ಯಶೋದರ ಪೂವಳ, ಸವಿತಾ ಕಾಮತ್, ನಾಗೇಶ್ ಕಾಮತ್, ಜಿನ್ನಪ್ಪ ಸಾಲಿಯಾನ್, ರಾಧಾಕೃಷ್ಣಕೋಲ್ಪೆ,ಮುಂತಾದ ವರು ಉಪಸ್ಥಿತರಿದ್ದರು.
.
ಜೆಸಿಐ ಕಡಬ ಕದಂಬ ಘಟಕದ ವತಿಯಿಂದ ಭಕ್ತಾದಿಗಳಿಗೆ ಉಚಿತವಾಗಿ ಮಜ್ಜಿಗೆ ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಎಸ್.ಅಂಗಾರ ಅವರು ಚಾಲನೆ ನೀಡಿದರು. ಉತ್ಸವದ ಅಂಗವಾಗಿ ದೇವಾಲಯವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

17 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

17 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

17 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

2 days ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

2 days ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

2 days ago