ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಜೆಯಿಂದ ಉಳಿಯಿತು ಮಕ್ಕಳ ಪ್ರಾಣ. ಆರು ಅಂತಸ್ತಿನ ಶಾಲಾ ಕಟ್ಟಡದಿಂದ ಬೃಹತ್ ಮೇಲ್ಛಾವಣಿ ಕುಸಿತ, ತಪ್ಪಿದ ಭಾರೀ ಅನಾಹುತ.

ಉಳ್ಳಾಲ: ಸತತವಾಗಿ ಕಳೆದ ಮೂರು ದಿನಗಳಿ೦ದ ಸುರಿಯುತ್ತಿರುವ ಗಾಳಿ-ಮಳೆಗೆ ತಲಪಾಡಿಯ ದೇವಿನಗರದಲ್ಲಿನ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್‌ ಛಾವಣಿಯು ಹಾರಿ ಕೆಳಗೆ ಬಿದ್ದಿದೆ. ಜಿಲ್ಲಾಧಿಕಾರಿಗಳ ಆಜ್ಞೆಯಂತೆ ಶಾಲಾ-ಕಾಲೇಜುಗಳಿಗೆ ರಜೆಯಿದ್ದುದರಿಂದ ಅನೇಕ ವಿದ್ಯಾರ್ಥಿಗಳ ಜೀವ ಉಳಿದಿದೆ.

ಬುಧವಾರ ಬೆಳಿಗ್ಗೆ ಸುಮಾರು 9 ಗಂಟಿ ವೇಳೆಗೆ ಘಟನೆ ನಡೆದಿದ್ದು, ದೇವಿನಗರದ ಶಾರದಾ ವಿದ್ಯಾಲಯದ ಆವರಣದ ಒಳಗಿನ ಆರು ಇತ್ತೀಚಿಗೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್‌ ಚಾವಣಿ ಹಾಗೂ ಶೀಟ್‌ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಹಾನಿಗೊಂಡಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಕಳೆದೆರಡು ದಿವಸಗಳಿ೦ದ ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ಅನಾಹುತವೊಂದು ತಪ್ಪಿದ೦ತಾಗಿದೆ. ಶಾಲಾಡಳಿತವು ಕ್ರೇನ್‌ ಮುಖಾಂತರ ಧರೆಗುರುಳಿರುವ ಶೀಟ್‌, ಕಬ್ಮಿಣದ ಸಲಾಕೆಗಳನ್ನು ತೆರವುಗೊಳಿಸುವ ಕೆಲಸ ನಡಸುತ್ತಿದೆ.

ಸಾಂಸ್ಕೃತಿಕ ಮತ್ತು ಧಾರ್ಮಿಕ ಮೌಲ್ಯಗಳ ಶಿಕ್ಷಣದ ಹೆಸರಿನಲ್ಲಿ ಎಲ್‌.ಕೆ.ಜಿ ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸುವ ಶಾರದ ವಿದ್ಯಾಲಯದ ಈ ಬೇಜವಾಬ್ದಾರಿತನಕ್ಕೆ ಪೋಷಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲಾಡಳಿತವು ಇ೦ತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!