ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಜೆಯಿಂದ ಉಳಿಯಿತು ಮಕ್ಕಳ ಪ್ರಾಣ. ಆರು ಅಂತಸ್ತಿನ ಶಾಲಾ ಕಟ್ಟಡದಿಂದ ಬೃಹತ್ ಮೇಲ್ಛಾವಣಿ ಕುಸಿತ, ತಪ್ಪಿದ ಭಾರೀ ಅನಾಹುತ.

ಉಳ್ಳಾಲ: ಸತತವಾಗಿ ಕಳೆದ ಮೂರು ದಿನಗಳಿ೦ದ ಸುರಿಯುತ್ತಿರುವ ಗಾಳಿ-ಮಳೆಗೆ ತಲಪಾಡಿಯ ದೇವಿನಗರದಲ್ಲಿನ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್‌ ಛಾವಣಿಯು ಹಾರಿ ಕೆಳಗೆ ಬಿದ್ದಿದೆ. ಜಿಲ್ಲಾಧಿಕಾರಿಗಳ ಆಜ್ಞೆಯಂತೆ ಶಾಲಾ-ಕಾಲೇಜುಗಳಿಗೆ ರಜೆಯಿದ್ದುದರಿಂದ ಅನೇಕ ವಿದ್ಯಾರ್ಥಿಗಳ ಜೀವ ಉಳಿದಿದೆ.

ಬುಧವಾರ ಬೆಳಿಗ್ಗೆ ಸುಮಾರು 9 ಗಂಟಿ ವೇಳೆಗೆ ಘಟನೆ ನಡೆದಿದ್ದು, ದೇವಿನಗರದ ಶಾರದಾ ವಿದ್ಯಾಲಯದ ಆವರಣದ ಒಳಗಿನ ಆರು ಇತ್ತೀಚಿಗೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್‌ ಚಾವಣಿ ಹಾಗೂ ಶೀಟ್‌ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಹಾನಿಗೊಂಡಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಕಳೆದೆರಡು ದಿವಸಗಳಿ೦ದ ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ಅನಾಹುತವೊಂದು ತಪ್ಪಿದ೦ತಾಗಿದೆ. ಶಾಲಾಡಳಿತವು ಕ್ರೇನ್‌ ಮುಖಾಂತರ ಧರೆಗುರುಳಿರುವ ಶೀಟ್‌, ಕಬ್ಮಿಣದ ಸಲಾಕೆಗಳನ್ನು ತೆರವುಗೊಳಿಸುವ ಕೆಲಸ ನಡಸುತ್ತಿದೆ.

ಸಾಂಸ್ಕೃತಿಕ ಮತ್ತು ಧಾರ್ಮಿಕ ಮೌಲ್ಯಗಳ ಶಿಕ್ಷಣದ ಹೆಸರಿನಲ್ಲಿ ಎಲ್‌.ಕೆ.ಜಿ ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸುವ ಶಾರದ ವಿದ್ಯಾಲಯದ ಈ ಬೇಜವಾಬ್ದಾರಿತನಕ್ಕೆ ಪೋಷಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲಾಡಳಿತವು ಇ೦ತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!