ಉಳ್ಳಾಲ: ಸತತವಾಗಿ ಕಳೆದ ಮೂರು ದಿನಗಳಿ೦ದ ಸುರಿಯುತ್ತಿರುವ ಗಾಳಿ-ಮಳೆಗೆ ತಲಪಾಡಿಯ ದೇವಿನಗರದಲ್ಲಿನ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್ ಛಾವಣಿಯು ಹಾರಿ ಕೆಳಗೆ ಬಿದ್ದಿದೆ. ಜಿಲ್ಲಾಧಿಕಾರಿಗಳ ಆಜ್ಞೆಯಂತೆ ಶಾಲಾ-ಕಾಲೇಜುಗಳಿಗೆ ರಜೆಯಿದ್ದುದರಿಂದ ಅನೇಕ ವಿದ್ಯಾರ್ಥಿಗಳ ಜೀವ ಉಳಿದಿದೆ.
ಬುಧವಾರ ಬೆಳಿಗ್ಗೆ ಸುಮಾರು 9 ಗಂಟಿ ವೇಳೆಗೆ ಘಟನೆ ನಡೆದಿದ್ದು, ದೇವಿನಗರದ ಶಾರದಾ ವಿದ್ಯಾಲಯದ ಆವರಣದ ಒಳಗಿನ ಆರು ಇತ್ತೀಚಿಗೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್ ಚಾವಣಿ ಹಾಗೂ ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಹಾನಿಗೊಂಡಿವೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಕಳೆದೆರಡು ದಿವಸಗಳಿ೦ದ ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ಅನಾಹುತವೊಂದು ತಪ್ಪಿದ೦ತಾಗಿದೆ. ಶಾಲಾಡಳಿತವು ಕ್ರೇನ್ ಮುಖಾಂತರ ಧರೆಗುರುಳಿರುವ ಶೀಟ್, ಕಬ್ಮಿಣದ ಸಲಾಕೆಗಳನ್ನು ತೆರವುಗೊಳಿಸುವ ಕೆಲಸ ನಡಸುತ್ತಿದೆ.
ಸಾಂಸ್ಕೃತಿಕ ಮತ್ತು ಧಾರ್ಮಿಕ ಮೌಲ್ಯಗಳ ಶಿಕ್ಷಣದ ಹೆಸರಿನಲ್ಲಿ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸುವ ಶಾರದ ವಿದ್ಯಾಲಯದ ಈ ಬೇಜವಾಬ್ದಾರಿತನಕ್ಕೆ ಪೋಷಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲಾಡಳಿತವು ಇ೦ತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…