ಉಳ್ಳಾಲ: ಸತತವಾಗಿ ಕಳೆದ ಮೂರು ದಿನಗಳಿ೦ದ ಸುರಿಯುತ್ತಿರುವ ಗಾಳಿ-ಮಳೆಗೆ ತಲಪಾಡಿಯ ದೇವಿನಗರದಲ್ಲಿನ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್ ಛಾವಣಿಯು ಹಾರಿ ಕೆಳಗೆ ಬಿದ್ದಿದೆ. ಜಿಲ್ಲಾಧಿಕಾರಿಗಳ ಆಜ್ಞೆಯಂತೆ ಶಾಲಾ-ಕಾಲೇಜುಗಳಿಗೆ ರಜೆಯಿದ್ದುದರಿಂದ ಅನೇಕ ವಿದ್ಯಾರ್ಥಿಗಳ ಜೀವ ಉಳಿದಿದೆ.
ಬುಧವಾರ ಬೆಳಿಗ್ಗೆ ಸುಮಾರು 9 ಗಂಟಿ ವೇಳೆಗೆ ಘಟನೆ ನಡೆದಿದ್ದು, ದೇವಿನಗರದ ಶಾರದಾ ವಿದ್ಯಾಲಯದ ಆವರಣದ ಒಳಗಿನ ಆರು ಇತ್ತೀಚಿಗೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್ ಚಾವಣಿ ಹಾಗೂ ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಹಾನಿಗೊಂಡಿವೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಕಳೆದೆರಡು ದಿವಸಗಳಿ೦ದ ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ಅನಾಹುತವೊಂದು ತಪ್ಪಿದ೦ತಾಗಿದೆ. ಶಾಲಾಡಳಿತವು ಕ್ರೇನ್ ಮುಖಾಂತರ ಧರೆಗುರುಳಿರುವ ಶೀಟ್, ಕಬ್ಮಿಣದ ಸಲಾಕೆಗಳನ್ನು ತೆರವುಗೊಳಿಸುವ ಕೆಲಸ ನಡಸುತ್ತಿದೆ.
ಸಾಂಸ್ಕೃತಿಕ ಮತ್ತು ಧಾರ್ಮಿಕ ಮೌಲ್ಯಗಳ ಶಿಕ್ಷಣದ ಹೆಸರಿನಲ್ಲಿ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸುವ ಶಾರದ ವಿದ್ಯಾಲಯದ ಈ ಬೇಜವಾಬ್ದಾರಿತನಕ್ಕೆ ಪೋಷಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲಾಡಳಿತವು ಇ೦ತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…