ಸುರತ್ಕಲ್: ಅರ್ಧ ನಿರ್ಮಾಣ ಮಾಡಿ ಬಿಡಲಾಗಿರುವ ಮೂಡಾ ಮಾರುಕಟ್ಟೆಯ ಒಳಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ರವಿವಾರ ರಾತ್ರಿ ವರದಿಯಾಗಿದೆ.

ಮಾರುಕಟ್ಟೆಯ ಮೇಲಂತಸ್ತಿನಲ್ಲಿ ಈ ಘಟನೆ ನಡೆದಿದ್ದು, ಶೇಖರಿಸಿ ಇಡಲಾಗಿದ್ದ ಮರದ ರೀಪುಗಳಿಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಷಿದ್ದಾರೆ.
ಪೆಟ್ರೋಲ್ ಅಥವಾ ಸೀಮೆ ಎಣ್ಣೆ ಬಳಸಿ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸದ್ಯ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಬಂದಿದ್ದು, ಸ್ಥಳೀಯ ನೀರಿನ ಟ್ಯಾಂಕರ್ ನಲ್ಲಿ ನೀರು ತರಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಲು ಮುಂದಾಗಿದ್ದಾರೆ.



