ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂಬ ಹೇಳಿಕೆಯನ್ನು ಕುಮಾರ ಸ್ವಾಮಿ ನೀಡಿದ್ದು, ಇದು ಖಂಡನೀಯ ಎಂದು ಮಹಿಳಾ ಕಾಂಗ್ರೆಸ್ ತಿಳಿಸಿದೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ , ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದು,ಈ ಮಾತಿನಿಂದ ಹೇಳಿಕೆ ನೀಡಿದವರ ಮೌಲ್ಯ ಕುಸಿಯುತ್ತದೆ ಎಂದು ತಿಳಿಸಿದರು.
ಬಿಜೆಪಿಯವರು ಮಾತೆಯರು,ಮಾತೆಯರು ಎಂದು ಮತಪಡೆಯುತ್ತಾರೆ ವಿನಹಃ ಅವರಿಗೆ ಗೌರವ ನೀಡಲು ಗೊತ್ತಿಲ್ಲ ಎಂದು ಆರೋಪ ಮಾಡಿದರು.
ಈ ಹೇಳಿಕೆಗೆ ಮಹಿಳೆಯರು ಒಂದಾಗಿ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಅವರು ತಿಳಿಸಿದರು.
ಪ್ರತಿಭಟನೆಯಲ್ಲಿ ಜೊಸ್ಪಿನ್ ಡಿಸೋಜ,ಜಯಂತಿ ಪೂಜಾರಿ,ಜೆಸಿಂತಾ ಡಿಸೋಜ,ಮಲ್ಲಿಕಾ ಶೆಟ್ಟಿ,ಅಶ್ವನಿಕುಮಾರ್ ರೈ,
ಬೇಬಿಕುಂದರ್,ಸುದೀಪ್ ಕುಮಾರ್ ರೈ,ಮಾಯಿಲಪ್ಪ ಸಾಲಿಯಾನ್,ಐಡಾ ಸುರೇಶ್ ,ಸುದರ್ಶನ್ ಜಯುನ್ ಶೋಭಾ ಶೆಟ್ಟಿ,ಜನಾರ್ದನ ಚಂಡ್ತಿಮಾರ್, ಪದ್ಮಶೇಖರ್ ಜೈನ್ ,ಸಂಜೀವ ಪೂಜಾರಿ, ಮಧುಸೂದನ್ ಶೆಣೈ,ಪರಮೇಶ್ವರ ಮೂಲ್ಯ,ಅಬ್ಬಾಸ್ ಆಲಿ,ಚಂದ್ರಪ್ರಕಾಶ್ ಶೆಟ್ಟಿ,ಸದಾಶಿವ ಬಂಗೇರ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…