ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂಬ ಹೇಳಿಕೆಯನ್ನು ಕುಮಾರ ಸ್ವಾಮಿ ನೀಡಿದ್ದು, ಇದು ಖಂಡನೀಯ ಎಂದು ಮಹಿಳಾ ಕಾಂಗ್ರೆಸ್ ತಿಳಿಸಿದೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ , ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದು,ಈ ಮಾತಿನಿಂದ ಹೇಳಿಕೆ ನೀಡಿದವರ ಮೌಲ್ಯ ಕುಸಿಯುತ್ತದೆ ಎಂದು ತಿಳಿಸಿದರು.
ಬಿಜೆಪಿಯವರು ಮಾತೆಯರು,ಮಾತೆಯರು ಎಂದು ಮತಪಡೆಯುತ್ತಾರೆ ವಿನಹಃ ಅವರಿಗೆ ಗೌರವ ನೀಡಲು ಗೊತ್ತಿಲ್ಲ ಎಂದು ಆರೋಪ ಮಾಡಿದರು.
ಈ ಹೇಳಿಕೆಗೆ ಮಹಿಳೆಯರು ಒಂದಾಗಿ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಅವರು ತಿಳಿಸಿದರು.
ಪ್ರತಿಭಟನೆಯಲ್ಲಿ ಜೊಸ್ಪಿನ್ ಡಿಸೋಜ,ಜಯಂತಿ ಪೂಜಾರಿ,ಜೆಸಿಂತಾ ಡಿಸೋಜ,ಮಲ್ಲಿಕಾ ಶೆಟ್ಟಿ,ಅಶ್ವನಿಕುಮಾರ್ ರೈ,
ಬೇಬಿಕುಂದರ್,ಸುದೀಪ್ ಕುಮಾರ್ ರೈ,ಮಾಯಿಲಪ್ಪ ಸಾಲಿಯಾನ್,ಐಡಾ ಸುರೇಶ್ ,ಸುದರ್ಶನ್ ಜಯುನ್ ಶೋಭಾ ಶೆಟ್ಟಿ,ಜನಾರ್ದನ ಚಂಡ್ತಿಮಾರ್, ಪದ್ಮಶೇಖರ್ ಜೈನ್ ,ಸಂಜೀವ ಪೂಜಾರಿ, ಮಧುಸೂದನ್ ಶೆಣೈ,ಪರಮೇಶ್ವರ ಮೂಲ್ಯ,ಅಬ್ಬಾಸ್ ಆಲಿ,ಚಂದ್ರಪ್ರಕಾಶ್ ಶೆಟ್ಟಿ,ಸದಾಶಿವ ಬಂಗೇರ ಉಪಸ್ಥಿತರಿದ್ದರು.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…