ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂಬ ಹೇಳಿಕೆಯನ್ನು ಕುಮಾರ ಸ್ವಾಮಿ ನೀಡಿದ್ದು, ಇದು ಖಂಡನೀಯ ಎಂದು ಮಹಿಳಾ ಕಾಂಗ್ರೆಸ್ ತಿಳಿಸಿದೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ , ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದು,ಈ ಮಾತಿನಿಂದ ಹೇಳಿಕೆ ನೀಡಿದವರ ಮೌಲ್ಯ ಕುಸಿಯುತ್ತದೆ ಎಂದು ತಿಳಿಸಿದರು.
ಬಿಜೆಪಿಯವರು ಮಾತೆಯರು,ಮಾತೆಯರು ಎಂದು ಮತಪಡೆಯುತ್ತಾರೆ ವಿನಹಃ ಅವರಿಗೆ ಗೌರವ ನೀಡಲು ಗೊತ್ತಿಲ್ಲ ಎಂದು ಆರೋಪ ಮಾಡಿದರು.
ಈ ಹೇಳಿಕೆಗೆ ಮಹಿಳೆಯರು ಒಂದಾಗಿ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಅವರು ತಿಳಿಸಿದರು.
ಪ್ರತಿಭಟನೆಯಲ್ಲಿ ಜೊಸ್ಪಿನ್ ಡಿಸೋಜ,ಜಯಂತಿ ಪೂಜಾರಿ,ಜೆಸಿಂತಾ ಡಿಸೋಜ,ಮಲ್ಲಿಕಾ ಶೆಟ್ಟಿ,ಅಶ್ವನಿಕುಮಾರ್ ರೈ,
ಬೇಬಿಕುಂದರ್,ಸುದೀಪ್ ಕುಮಾರ್ ರೈ,ಮಾಯಿಲಪ್ಪ ಸಾಲಿಯಾನ್,ಐಡಾ ಸುರೇಶ್ ,ಸುದರ್ಶನ್ ಜಯುನ್ ಶೋಭಾ ಶೆಟ್ಟಿ,ಜನಾರ್ದನ ಚಂಡ್ತಿಮಾರ್, ಪದ್ಮಶೇಖರ್ ಜೈನ್ ,ಸಂಜೀವ ಪೂಜಾರಿ, ಮಧುಸೂದನ್ ಶೆಣೈ,ಪರಮೇಶ್ವರ ಮೂಲ್ಯ,ಅಬ್ಬಾಸ್ ಆಲಿ,ಚಂದ್ರಪ್ರಕಾಶ್ ಶೆಟ್ಟಿ,ಸದಾಶಿವ ಬಂಗೇರ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…