ಜನ ಮನದ ನಾಡಿ ಮಿಡಿತ

Advertisement

ಕನ್ನಡ ಚಿತ್ರರಂಗ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.
ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಪ್ರಿಯರಾಗಿದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!