ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮತದಾನ ಕಾರ್ಯಕ್ರಮದಡಿ ಮತದಾನ ಮಾಡಿ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದ ಘಟನೆ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರ ಎಂಬಲ್ಲಿ ಸಂಭವಿಸಿದೆ.
ನಿವೃತ್ತ ಗ್ರಾಮಲೆಕ್ಕಾಧಿಕಾರಿ ದಿ. ನಾರಾಯಣ ಉಪಾಧ್ಯ ಅವರ ಪತ್ನಿ ಪಿ. ಯಶೋದಾ ನಾರಾಯಣ ಉಪಾಧ್ಯ (83) ಮೃತಪಟ್ಟ ಮಹಿಳೆ. ಅವರಿಗೆ ಸಣ್ಣ ಪ್ರಮಾಣದ ಎದೆನೋವು, ಸುಸ್ತು ಕಾಣಿಸಿಕೊಂಡಿತ್ತು. ಸೋಮವಾರ ಅವರಿಗೆ ಮನೆಯಿಂದಲೇ ಮತದಾನಕ್ಕೆ ಸಮಯ ನಿಶ್ಚಯವಾಗಿತ್ತು. ಮನೆಯವರು ಆಸ್ಪತ್ರೆಗೆ ಹೋಗುವ ಎಂದು ಎಷ್ಟೇ ಒತ್ತಾಯಿಸಿದರೂ ಅಜ್ಜಿ ಒಪ್ಪಲಿಲ್ಲ. ಮತದಾನ ಮುಗಿಸಿಯೇ ನಾನು ಆಸ್ಪತ್ರೆಗೆ ತೆರಳುವುದು ಎಂದು ಹಠ ಹಿಡಿದಿದ್ದರು. ಅದರಂತೆ ಕಾದು ಮತದಾನ ಮಾಡಿ ಬಳಿಕ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅನಾರೋಗ್ಯ ಉಲ್ಬಣಗೊಂಡು ರಾತ್ರಿ 9 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…