ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮತದಾನ ಕಾರ್ಯಕ್ರಮದಡಿ ಮತದಾನ ಮಾಡಿ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದ ಘಟನೆ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರ ಎಂಬಲ್ಲಿ ಸಂಭವಿಸಿದೆ.
ನಿವೃತ್ತ ಗ್ರಾಮಲೆಕ್ಕಾಧಿಕಾರಿ ದಿ. ನಾರಾಯಣ ಉಪಾಧ್ಯ ಅವರ ಪತ್ನಿ ಪಿ. ಯಶೋದಾ ನಾರಾಯಣ ಉಪಾಧ್ಯ (83) ಮೃತಪಟ್ಟ ಮಹಿಳೆ. ಅವರಿಗೆ ಸಣ್ಣ ಪ್ರಮಾಣದ ಎದೆನೋವು, ಸುಸ್ತು ಕಾಣಿಸಿಕೊಂಡಿತ್ತು. ಸೋಮವಾರ ಅವರಿಗೆ ಮನೆಯಿಂದಲೇ ಮತದಾನಕ್ಕೆ ಸಮಯ ನಿಶ್ಚಯವಾಗಿತ್ತು. ಮನೆಯವರು ಆಸ್ಪತ್ರೆಗೆ ಹೋಗುವ ಎಂದು ಎಷ್ಟೇ ಒತ್ತಾಯಿಸಿದರೂ ಅಜ್ಜಿ ಒಪ್ಪಲಿಲ್ಲ. ಮತದಾನ ಮುಗಿಸಿಯೇ ನಾನು ಆಸ್ಪತ್ರೆಗೆ ತೆರಳುವುದು ಎಂದು ಹಠ ಹಿಡಿದಿದ್ದರು. ಅದರಂತೆ ಕಾದು ಮತದಾನ ಮಾಡಿ ಬಳಿಕ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅನಾರೋಗ್ಯ ಉಲ್ಬಣಗೊಂಡು ರಾತ್ರಿ 9 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…