ಜನ ಮನದ ನಾಡಿ ಮಿಡಿತ

Advertisement

“ದ.ಕ. ಜಿಲ್ಲೆಯಲ್ಲಿ ಅಭಿವೃದ್ಧಿ ನಡೆದೇ ಇಲ್ಲ!”-ಮಮತಾ ಗಟ್ಟಿ

ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲೆಗೆ ಈ ಬಾರಿ ನಾರಾಯಣ ಗುರುಗಳ ತತ್ವ ಆದರ್ಶವನ್ನು ಸಂಪೂರ್ಣವಾಗಿ ಪರಿಪಾಲಿಸಿಕೊಂಡು ಬಂದಿರುವ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ. ಜಿಲ್ಲೆಯಲ್ಲಿದ್ದ ಬಿಜೆಪಿ ಸಂಸದರು ಜನರನ್ನು ಎತ್ತಿಕಟ್ಟುವ ಮೂಲಕ ಅಭಿವೃದ್ಧಿಯನ್ನು ಮಾಡದೇ ಜಾತಿ ಧರ್ಮಗಳ ಆಧಾರದಲ್ಲಿ ವಿಂಗಡಣೆ ಮಾಡಿ ಆಡಳಿತ ನಡೆಸಿದ್ದಾರೆ” ಎಂದು ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.


“ನರೇಂದ್ರ ಮೋದಿಯವರು ಯಾವೊಂದು ರೀತಿಯಲ್ಲಿಯೂ ಅಭಿವೃದ್ಧಿಯನ್ನು ಮಾಡದೇ ಕೇವಲ ದಿನನಿತ್ಯ ಅಗತ್ಯವಸ್ತುಗಳ ಮೇಲೆ ಜಿಎಸ್ಟಿ ಹಾಕಿದರು. ಕಪ್ಪು ಹಣ ವಾಪಾಸ್ ತರುವುದಾಗಿ ಹೇಳಿ ಬಡವರಿಂದ ಬ್ಯಾಂಕ್ ಗಳಲ್ಲಿ ಅಕೌಂಟ್ ಮಾಡಿಸಿ 35,000 ಲಕ್ಷ ಕೋಟಿ ಹಣವನ್ನು ಲೂಟಿ ಮಾಡಿದರು. ಕೊರೋನಾ ಸಂದರ್ಭದಲ್ಲಿಯೂ ಪಿಎಂ ಕೇರ್ ಫಂಡ್ ಗೆ ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿದರು. ಆದರೆ ಲೆಕ್ಕ ಕೊಡಲಿಲ್ಲ. ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಯುವಜನರನ್ನು ಮೋಸ ಮಾಡಿದರು” ಎಂದು ಆರೋಪಿಸಿದರು.
“ಜನರನ್ನು ಲೂಟಿ ಮಾಡುವುದನ್ನೇ ಕಾಯಕ ಮಾಡಿಕೊಂಡಿರುವ ಪ್ರಧಾನಿ ಅವರು ಜನರನ್ನು ವ್ಯವಸ್ಥಿತವಾಗಿ ವಂಚನೆ ಮಾಡುತ್ತಿದ್ದಾರೆ. ವಿಶ್ವಗುರು ಎಂದು ಕರೆಸಿಕೊಂಡವರು ಮಾಡಿದ್ದೇನು? ಜನರನ್ನು ಜಾತಿ ಧರ್ಮಗಳ ಆಧಾರದಲ್ಲಿ ವಿಂಗಡಿಸದೆ ಎಲ್ಲರನ್ನೂ ಸಮಾನವಾಗಿ ಕಾಣುವ ಪಕ್ಷ ಇದ್ದರೆ ಕಾಂಗ್ರೆಸ್ ಮಾತ್ರ”.

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಶೇ.90ರಷ್ಟು ಬಳಸಲ್ಪಡುತ್ತಿವೆ. ದೇಶದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂ. ನೆರವು, ಉದ್ಯೋಗದಲ್ಲಿ ಶೇ.50ರಷ್ಟು ಮೀಸಲಾತಿ ಸಹಿತ ಮಹಿಳೆಯರಿಗಾಗಿ ಹೊಸ ಯೋಜನೆಗಳನ್ನು ಈಗಾಗಲೇ ಘೋಷಣೆ ಮಾಡಿದ್ದಾರೆ. ಇದೆಲ್ಲವೂ ಜಾರಿಯಾಗಬೇಕಾದರೆ ಜನರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸವಿತಾ ಮಿಸ್ಕಿತ್, ಚಂದ್ರಕಲಾ ರಾವ್, ಗೀತಾ, ಮಂಜುಳಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!