ಜನ ಮನದ ನಾಡಿ ಮಿಡಿತ

Advertisement

ಕಟೀಲು ಜಾತ್ರೆಯಲ್ಲಿ ಕ್ಯಾಪ್ಸ್ ಫೌಂಡೇಶನ್ ನಿಂದ ಪ್ಲಾಸ್ಟಿಕ್ ಜಾಗೃತಿ

ಬಜಪೆ : ಶ್ರೀ ದುರ್ಗಾ ಪರಮೇಶ್ವರೀ ದೇವಳದಲ್ಲಿ ನಾಳೆ ನಡೆಯಲಿರುವ ಹಗಲು ರಥೋತ್ಸವದ ಸಂದರ್ಭ ಬೆಂಗಳೂರಿನ ಕ್ಯಾಪ್ಸ್ ಫೌಂಡೇಷನ್ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಗಜಾಗೃತಿ ಮಾಡಲಿದೆ. ಈ ನಿಟ್ಟಿನಲ್ಲಿ ಬರುವ 10 ಸಾವಿರ ಭಕ್ತರಿಗೆ ಬಟ್ಟೆ ಚೀಲಗಳನ್ನು ವಿತರಿಸಲಿದೆ ಎಂದು ಕ್ಯಾಪ್ಸ್ ಫೌಂಡೇಷನ್ ಅಧ್ಯಕ್ಷ ಸಿಎ ಚಂದ್ರಶೇಖರ ಶೆಟ್ಟಿ ಹೇಳಿದರು.


ಬುಧವಾರ ದೇಗುಲದ ಆಡಳಿತ ಮಂಡಳಿ ಹಾಗೂ ಸಿಬಂದಿಗಳ ಸಮ್ಮುಖ ಚೀಲ ಹಾಗೂ ಟೀಶರ್ಟ್ ಅನಾವರಣಗೊಳಿಸಲಾಯಿತು
ಇದೇ ಸಂದರ್ಭ 700 ಮಂದಿ ಕಟೀಲು ದೇಗುಲದ ಸಿಬಂದಿಗಳು ಹಾಗೂ ಸ್ವಯಂಸೇವಕರಿಗೆ ಟೀಶರ್ಟ್ ನೀಡಲಾಗುವುದು ಎಂದು ತಿಳಿಸಿದ ಚಂದ್ರಶೇಖರ ಶೆಟ್ಟಿ ಈಗಾಗಲೇ ಮುಂಡ್ಕೂರು ಕಜೆ, ಕೊಡೆತ್ತೂರು ತಾಳಿಪಾಡಿ ಮುಂತಾದ ಬ್ರಹ್ಮಕಲಶೋತ್ಸವ ಸಂದರ್ಭ ಬಟ್ಟೆ ಚೀಲಗಳನ್ನು ವಿತರಿಸಲಾಗಿದೆ. ಶಿಬರೂರು ಬ್ರಹ್ಮಕಲಶೋತ್ಸವದಲ್ಲಿ 50 ಸಾವಿರ ಬಟ್ಟೆ ಚೀಲ ನೀಡಲಾಗುತ್ತಿದೆ. ಮೂಲ್ಕಿ ತಾಲೂಕು, ದ.ಕ.ಜಿಲ್ಲಾ ಸಾಹಿತ್ಯ ಸಮ್ಮೇಳನ ಅಲ್ಲದೆ ಒಂದು ಸಾವಿರಕ್ಕೂ ಮಿಕ್ಕಿದ ಶಾಲೆಗಳ ಸಾವಿರಾರು ಮಕ್ಕಳಿಗೆ ಬಟ್ಟೆ ಚೀಲ ನೀಡಲಾಗಿದ್ದು ಪ್ಲಾಸ್ಟಿಕ್ ಬಳಸಬೇಡಿ. ಅಂಗಡಿ ಮುಂತಾದ ಕಡೆಗಳಿಗೆ ಹೋದಾಗ ಬಟ್ಟೆ ಚೀಲಗಳನ್ನೇ ಬಳಸಿ ಎನ್ನುವ ಜಾಗೃತಿಗಾಗಿ ಬಟ್ಟೆ ಚೀಲಗಳನ್ನು ನೀಡಲಾಗುತ್ತಿದೆ. ಅಲ್ಲದೆ ನೀರು ಪಾನೀಯ ಕುಡಿಯಲು ಪ್ಲಾಸ್ಟಿಕ್ ಲೋಟೆ ಬಳಸಬೇಡಿ ಎಂದು ಜಾಗೃತಿ ಮೂಡಸಲಾಗುತ್ತಿದೆ. ಸಹಸ್ರಾರು ಮಕ್ಕಳಿಗೆ ಸ್ಟೀಲಿನ ಬಾಟಲಿ ವಿತರಿಸಲಾಗಿದೆ. ಜಾತ್ರೆಗಳಲ್ಲಿ ಸ್ಟೀಲಿನ ಬಾಟಲಿಯಲ್ಲಿ ನೀರು ವಿತರಿಸಿ ಪ್ಲಾಸ್ಟಿಕ್ ಬಳಸದಂತೆ ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. ಮೂಲತಃ ಮುಂಡ್ಕೂರಿನವರಾದ ಚಂದ್ರಶೇಖರ ಶೆಟ್ಟಿ ಬೆಂಗಳೂರಿನಲ್ಲಿ ಸಿಎ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆ ನಡೆಸುತ್ತಿದ್ದಾರೆ. ಕಟೀಲು ಕೋಟ ರಾಮಕುಂಜ ಶಾಲೆಗಳಲ್ಲಿ ಸಯನ್ಸ್ ಪಾರ್ಕ್ ಗಳನ್ನು ನಿರ್ಮಿಸಿ ಆಧುನಿಕ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!