ಬಜಪೆ : ಶ್ರೀ ದುರ್ಗಾ ಪರಮೇಶ್ವರೀ ದೇವಳದಲ್ಲಿ ನಾಳೆ ನಡೆಯಲಿರುವ ಹಗಲು ರಥೋತ್ಸವದ ಸಂದರ್ಭ ಬೆಂಗಳೂರಿನ ಕ್ಯಾಪ್ಸ್ ಫೌಂಡೇಷನ್ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಗಜಾಗೃತಿ ಮಾಡಲಿದೆ. ಈ ನಿಟ್ಟಿನಲ್ಲಿ ಬರುವ 10 ಸಾವಿರ ಭಕ್ತರಿಗೆ ಬಟ್ಟೆ ಚೀಲಗಳನ್ನು ವಿತರಿಸಲಿದೆ ಎಂದು ಕ್ಯಾಪ್ಸ್ ಫೌಂಡೇಷನ್ ಅಧ್ಯಕ್ಷ ಸಿಎ ಚಂದ್ರಶೇಖರ ಶೆಟ್ಟಿ ಹೇಳಿದರು.
ಬುಧವಾರ ದೇಗುಲದ ಆಡಳಿತ ಮಂಡಳಿ ಹಾಗೂ ಸಿಬಂದಿಗಳ ಸಮ್ಮುಖ ಚೀಲ ಹಾಗೂ ಟೀಶರ್ಟ್ ಅನಾವರಣಗೊಳಿಸಲಾಯಿತು
ಇದೇ ಸಂದರ್ಭ 700 ಮಂದಿ ಕಟೀಲು ದೇಗುಲದ ಸಿಬಂದಿಗಳು ಹಾಗೂ ಸ್ವಯಂಸೇವಕರಿಗೆ ಟೀಶರ್ಟ್ ನೀಡಲಾಗುವುದು ಎಂದು ತಿಳಿಸಿದ ಚಂದ್ರಶೇಖರ ಶೆಟ್ಟಿ ಈಗಾಗಲೇ ಮುಂಡ್ಕೂರು ಕಜೆ, ಕೊಡೆತ್ತೂರು ತಾಳಿಪಾಡಿ ಮುಂತಾದ ಬ್ರಹ್ಮಕಲಶೋತ್ಸವ ಸಂದರ್ಭ ಬಟ್ಟೆ ಚೀಲಗಳನ್ನು ವಿತರಿಸಲಾಗಿದೆ. ಶಿಬರೂರು ಬ್ರಹ್ಮಕಲಶೋತ್ಸವದಲ್ಲಿ 50 ಸಾವಿರ ಬಟ್ಟೆ ಚೀಲ ನೀಡಲಾಗುತ್ತಿದೆ. ಮೂಲ್ಕಿ ತಾಲೂಕು, ದ.ಕ.ಜಿಲ್ಲಾ ಸಾಹಿತ್ಯ ಸಮ್ಮೇಳನ ಅಲ್ಲದೆ ಒಂದು ಸಾವಿರಕ್ಕೂ ಮಿಕ್ಕಿದ ಶಾಲೆಗಳ ಸಾವಿರಾರು ಮಕ್ಕಳಿಗೆ ಬಟ್ಟೆ ಚೀಲ ನೀಡಲಾಗಿದ್ದು ಪ್ಲಾಸ್ಟಿಕ್ ಬಳಸಬೇಡಿ. ಅಂಗಡಿ ಮುಂತಾದ ಕಡೆಗಳಿಗೆ ಹೋದಾಗ ಬಟ್ಟೆ ಚೀಲಗಳನ್ನೇ ಬಳಸಿ ಎನ್ನುವ ಜಾಗೃತಿಗಾಗಿ ಬಟ್ಟೆ ಚೀಲಗಳನ್ನು ನೀಡಲಾಗುತ್ತಿದೆ. ಅಲ್ಲದೆ ನೀರು ಪಾನೀಯ ಕುಡಿಯಲು ಪ್ಲಾಸ್ಟಿಕ್ ಲೋಟೆ ಬಳಸಬೇಡಿ ಎಂದು ಜಾಗೃತಿ ಮೂಡಸಲಾಗುತ್ತಿದೆ. ಸಹಸ್ರಾರು ಮಕ್ಕಳಿಗೆ ಸ್ಟೀಲಿನ ಬಾಟಲಿ ವಿತರಿಸಲಾಗಿದೆ. ಜಾತ್ರೆಗಳಲ್ಲಿ ಸ್ಟೀಲಿನ ಬಾಟಲಿಯಲ್ಲಿ ನೀರು ವಿತರಿಸಿ ಪ್ಲಾಸ್ಟಿಕ್ ಬಳಸದಂತೆ ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. ಮೂಲತಃ ಮುಂಡ್ಕೂರಿನವರಾದ ಚಂದ್ರಶೇಖರ ಶೆಟ್ಟಿ ಬೆಂಗಳೂರಿನಲ್ಲಿ ಸಿಎ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆ ನಡೆಸುತ್ತಿದ್ದಾರೆ. ಕಟೀಲು ಕೋಟ ರಾಮಕುಂಜ ಶಾಲೆಗಳಲ್ಲಿ ಸಯನ್ಸ್ ಪಾರ್ಕ್ ಗಳನ್ನು ನಿರ್ಮಿಸಿ ಆಧುನಿಕ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…