ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೈಕಂಬ ಕ್ರಾಸ್ ನಿಂದ ಬಿ.ಸಿ. ರೋಡ್ ವರೆಗೆ ಬೃಹತ್ ರೋಡ್ ಶೋ ಗುರುವಾರ ಸಂಜೆ ನಡೆಯಿತು.
ತೆರೆದ ವಾಹನದಲ್ಲಿ ಅಭ್ಯರ್ಥಿ ಸಾಗುತ್ತಿದ್ದರೆ, ಕಾರ್ಯಕರ್ತರು, ಮುಖಂಡರು ಜೊತೆಗೂಡಿದ್ದರು. ರೋಡ್ ಶೋ ಬಿ.ಸಿ. ರೋಡ್ ತಲುಪಿದ ಬಳಿಕ ಚುನಾವಣಾ ಪ್ರಚಾರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಳೆದ ಮೂವತ್ತಮೂರು ವರ್ಷಗಳಲ್ಲಿ ಬಿಜೆಪಿ ಸಾಧನೆ ಏನು ಎಂದರೆ ಕೋಮು ಸಂಘರ್ಷಕ್ಕೆ ಎಡೆ ನೀಡಿದ್ದು, ಹಿಂದುಳಿದ ವರ್ಗದ ಯುವಕರು ಆಸ್ಪತ್ರೆ ಸೇರಿದ್ದು, ಕೊಲೆಗೀಡಾದದ್ದು, ಹಲವು ಮನೆಗಳನ್ನು ಅನಾಥವಾಗಿಸಿದ್ದು. ಇದು ಬಿಟ್ಟರೆ, ಯಾವುದೇ ಯೋಜನೆಗಳು ಬಿಜೆಪಿ ಕಾಲದಲ್ಲಿ ಬಂದಿಲ್ಲ, ಕಾಂಗ್ರೆಸ್ ಸಂಸದರಿದ್ದಾಗ ಜಿಲ್ಲೆಗೆ ಹಲವು ಯೋಜನೆಗಳು ಜಿಲ್ಲೆಗೆ ಬಂದಿದೆ ಎಂದರು.
ನನ್ನ ಹಿಂದೂ ಧರ್ಮ ನನಗೆ ಕಲಿಸಿಕೊಟ್ಟ ಜ್ಞಾನದಿಂದ ಬಡವರ ಕಣ್ಣೀರೊರೆಸುವ ಕೆಲಸ ಮಾಡಿಕೊಂಡು ಬಂದಿದ್ದೇನೆ. ಇದೇ ನಿಜವಾದ ಹಿಂದೂ ಧರ್ಮ ಎಂದು ನಾನು ನಂಬಿಕೊಂಡು ಬಂದಿದ್ದೇನೆ. ಇದೀಗ ನೈಜ ಹಿಂದೂ ಧರ್ಮವನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಲಿದ್ದೇವೆ ಎಂದರು.
ಮಹಾನಗರಿಗಳಂತೆ ನಮ್ಮ ಮಂಗಳೂರು ದಿನದ ಇಪ್ಪತ್ತು ಗಂಟೆ ಲವಲವಿಕೆಯಿಂದ ಕೂಡಿರಬೇಕಿತ್ತು. ಆದರೆ ಕೋಮು ಹಣೆಪಟ್ಟಿ ಬಿದ್ದ ಕಾರಣ ಸಂಜೆ ಏಳು ಗಂಟೆಗೆ ಮಂಗಳೂರು ಸ್ತಬ್ದವಾಗಿ ಬಿಡುತ್ತದೆ. ಹೀಗಾಗಲು ಅವಕಾಶ ನೀಡಬಾರದು. ಕೋಮು ಸಂಘರ್ಷದ ಹಣೆಪಟ್ಟಿ ಕಳಚಿ, ಉದ್ಯೋಗ ಸೃಷ್ಟಿ ಜಿಲ್ಲೆಯಲ್ಲಿ ಆಗಬೇಕಿದೆ. ನಮ್ಮ ಊರಿನ ಯುವಕರು ನಮ್ಮೂರಲ್ಲೇ ದುಡಿಯಬೇಕು. ತಮ್ಮ ಪೋಷಕರ ಜೊತೆಯೇ ಇರಬೇಕು. ಇದಕ್ಕಾಗಿ ಕಾಂಗ್ರೆಸ್ ಗೆಲ್ಲಬೇಕು. ಈಗಾಗಲೇ ಗೆಲ್ಲುವ ಸೂಚನೆ ನಮಗೆ ಸ್ಪಷ್ಟವಾಗಿದೆ. ಹಾಗೆಂದು ಮೈಮರೆಯುವಂತಿಲ್ಲ. ಈಗಾಗಲೇ ಅಪಪ್ರಚಾರದ ಕೆಲಸಕ್ಕೆ ಮುಂದಾಗಿದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳದೇ, ಧೈರ್ಯ ಕಳೆದುಕೊಳ್ಳದೇ ಗೆಲುವಿಗಾಗಿ ಶ್ರಮಿಸಿ ಎಂದರು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ದೇಶದ ಪ್ರಜಾಪ್ರಭುತ್ವ ಉಳಿಸಲು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.
ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ ಮಾತನಾಡಿ, ಇಂದು ಕಾಂಗ್ರೆಸಿನ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಗೆಲ್ಲುವ ಅನಿವಾರ್ಯತೆ ಇದೆ. ನೊಂದವರ ಧ್ವನಿಯಾಗಿ, ಬೇಡಿಕೆಗಳನ್ನು ಸರಕಾರಕ್ಕೆ ಸಮರ್ಥವಾಗಿ ತಲುಪಿಸಲು, ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ನಿರ್ವಹಿಸಲು ಪದ್ಮರಾಜ್ ಅರ್ಹ ವ್ಯಕ್ತಿ. ಮುಂದಿನ ಭಾರತ ಸಮರ್ಥ, ಬಲಿಷ್ಠ ಭಾರತವಾಗಬೇಕು. ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂದರು.
ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಕೆಪಿಸಿಸಿ ಸದಸ್ಯ ಅಶ್ವನಿ ಕುಮಾರ್ ರೈ, ಪದ್ಮಶೇಖರ್ ಜೈನ್, ಕೆ.ಸಂಜೀವ ಪೂಜಾರಿ, ಸುದರ್ಶನ್ ಜೈನ್, ಅಬ್ಬಾಸ್ ಅಲಿ, ಸುರೇಶ್ ಕುಮಾರ್ ನಾವೂರು, ಜಗದೀಶ್ ಕೊಯಿಲ, ಇಬ್ರಾಹಿಂ ನವಾಝ್, ಜಯಂತಿ ವಿ. ಪೂಜಾರಿ, ಜೋಸ್ಫಿನ್ ಡಿಸೋಜಾ, ಬೇಬಿ ಕುಂದರ್, ಅನ್ವರ್ ಕರೋಪಾಡಿ, ಮೋಹನ್ ಗೌಡ ಕಲ್ಮಂಜ, ಪದ್ಮನಾಭ ರೈ, ನಾರಾಯಣ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಡಿ ಸ್ವಾಗತಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…