ಬಜ್ಪೆ: ಹೆದ್ದಾರಿಯಲ್ಲಿ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ತಪ್ಪಿದ ಅನಾಹುತ
ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯಲ್ಲಿದ್ದ ಅಂಗಡಿಗಳಿಗೆ ಗುದ್ದಿ ಬಳಿಕ ಖಾಸಗಿ ಬಸ್, ಲಾರಿ ಮತ್ತು ಹಲವು ವಾಹನಗಳಿಗೆ ಗುದ್ದಿ ಪಲ್ಟಿಯಾದ ಘಟನೆ ಬಜ್ಪೆ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಅವಘಡ ಸಂಭವಿಸಿದೆ.
ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿದ್ದು, ಚಾಲಕ ನಿಲ್ಲಿಸಲು ಆಗದೆ ಮುಂದೆ ಸಾಗಿದ್ದಾನೆ. ಸುಮಾರು 500 ಮೀಟರ್ ದೂರದ ವರೆಗೂ ಬ್ರೇಕ್ ಸಿಗದೆ ಚಾಲಕ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದ್ರೆ ಈ ನಡುವೆ ರಸ್ತೆಯಲ್ಲಿ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಲಾರಿ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ಜಖಂ ಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆ ಸೇರಿದ್ದಾರೆ. ಬಳಿಕ ಮುಂದೆ ಚಲಿಸಿದ ಲಾರಿ ಎಣ್ಣೆಯನ್ನು ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಆ ವಾಹನ ಕೂಡಾ ರಸ್ತೆಗೆ ಉರುಳಿ ಬಿದ್ದಿದ್ದು, ರಸ್ತೆಯಲ್ಲಿ ಎಣ್ಣೆ ಪ್ಯಾಕೆಟ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಇದೇ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಒಂದು ಲಾರಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದೆ. ಬಳಿಕ ಎಡಪದವು ಪೇಟೆಯ ಬಳಿ ಬಂದಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದು ನಿಂತಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…