ಜನ ಮನದ ನಾಡಿ ಮಿಡಿತ

Advertisement

ಡಾ. ರಾಮಕೃಷ್ಣ ಶಿರೂರು “ಕರ್ನಾಟಕ ಪ್ರಜಾಭೂಷಣ -2024″ಕ್ಕೆ ಆಯ್ಕೆ

*ಡಾ.ರಾಮಕೃಷ್ಣ ಶಿರೂರು ಅವರು “ಕರ್ನಾಟಕ ಪ್ರಜಾ ಭೂಷಣ-2024” ಮಾಡಲಾಗಿದೆ ಎಂದು ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಅವರು ತಿಳಿಸಿರುತ್ತಾರೆ. ಏಪ್ರಿಲ್ 28ರಂದು ಮೈಸೂರಿನ ಜೆ.ಎಲ್‌.ಬಿ. ರಸ್ತೆಯ ರೋಟರಿ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಸುಮಂಗಲಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಅವರು ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪರವಾಗಿ ಡಾ. ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!