ಸುರತ್ಕಲ್: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ನಲ್ಲಿ ಶುಕ್ರವಾರ ತಡರಾತ್ರಿ ವರದಿಯಾಗಿದೆ.
ಕಾರು ಮಂಗಳೂರು ವಿಮಾನ ನಿಲ್ದಾಣದಿಂದ ಉಡುಪಿಗೆ ತೆರಳುತ್ತಿತ್ತು. ಈ ವೇಳೆ ಮಳೆಯಾಗುತ್ತಿದ್ದ ಕಾರಣ ಚಾಲಕ ನಿಯಂತ್ರಣ ಕಳೆದುಕೊಂಡು ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೆಡ್ ಗೆ ಡಿಕ್ಕಿಹೊಡೆದು ಹಲವು ಬಾರಿ ಪಲ್ಟಿಯಾಗಿ ಹೆದ್ದಾರಿ ಪಕ್ಕದ ದಾರಿ ದೀಪದ ಬೃಹತ್ ಕಂಬಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯ ಬದಿಯಲ್ಲಿ ನಿಂತಿದೆ.
ಘಟನೆಯಿಂದ ಕಾರಿನ ಒಳಗೆ ಸಿಲುಕಿದ್ದ ಚಾಲಕನನ್ನು ಸಾರ್ವಜನಿಕರು ಹರಸಾಹಸ ಪಟ್ಟು ಹೊರತೆಗೆದು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಾಲಕ ಅದಾಗಲೇ ಮೃತಪಟ್ಟಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹೈವೇ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…