ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು.
ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ.
ಕಟೀಲಿನಿಂದ ಶಿಬರೂರಿಗೆ ನಡೆದ ಮೆರವಣಿಗೆಗೆ ಪಲಿಮಾರು ಶ್ರೀ ವಿದ್ಯಾಧೀಶ ಸ್ವಾಮೀಜಿ, ವೇದವ್ಯಾಸ ತಂತ್ರಿ ಕಟೀಲಿನ ಅಸ್ರಣ್ಣರು, ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಜೀರ್ಣೋದ್ದಾರ ಮತ್ರು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಏಳಿಂಜೆ ಕೋಂಜಾಲುಗುತ್ತು ಪ್ರಭಾಕರ ಶೆಟ್ಟಿ, ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಬ್ರಹ್ಮಕಲಶೋತ್ಸವ ಮತ್ತು ಜೀಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶಿಬರೂರು-ಅತ್ತೂರು ಕೊಡೆತ್ತೂರು ಗ್ರಾಮಸ್ಥರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…