ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ‘ಡ್ರಾಮಾ ಜ್ಯೂನಿಯರ್ಸ್’ ಕೂಡ ಒಂದು. ಮಕ್ಕಳಿನ ಪ್ರತಿಭೆಯನ್ನು ಬೆಳಕಿಗೆ ತರುವಂತಹ ಈ ಶೋ, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತದೆ. ಅಂದಹಾಗೆ, ಕೆಲ ತಿಂಗಳ ಹಿಂದೆ ಶುರುವಾಗಿದ್ದ ‘ಡ್ರಾಮಾ ಜ್ಯೂನಿಯರ್ಸ್’ ಸೀಸನ್ 5ಕ್ಕೆ ಕೊನೆಗೂ ತೆರೆಬಿದ್ದಿದೆ. ಈ ಬಾರಿ ವಿಷ್ಣು ಕುಣಿಗಲ್ ಮತ್ತು ರಿಷಿಕಾ ಕುಂದೇಶ್ವರ ಅವರು ಜಂಟಿಯಾಗಿ ವಿನ್ನರ್ ಪಟ್ಟ ಪಡೆದುಕೊಂಡಿದ್ದಾರೆ.
ಬಾನುವಾರ ನಡೆದಿದ್ದ ಫೈನಲ್ ರೌಂಡ್ನಲ್ಲಿ ರಿಷಿಕಾ ಕುಂದೇಶ್ವರ್ ಹಾಗೂ ವಿಷ್ಣು ಇಬ್ಬರೂ ಜಂಟಿಯಾಗಿ ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
ಹಲವು ವಿಭಾಗಗಳಲ್ಲಿ ನಡೆದಿದ್ದ ಈ ಡ್ರಾಮಾ ಜ್ಯೂನಿಯರ್ ಕಾಂಪಿಟೀಷನನಲ್ಲಿ ಆರಂಭದಿಂದಲೇ ರಿಷಿಕಾ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪೌರಾಣಿಕ , ಐತಿಹಾಸಿಕ, ಜಾನಪದ, ಶಾಸ್ತ್ರೀಯ, ಮತ್ತು ಕಾಮಿಡಿ ವಿಭಾಗದಲ್ಲಿ ಉತ್ತಮ ಪರ್ಫಾರ್ಮೆನ್ಸ್ ತೋರಿಸುವ ಮೂಲಕ ರಿಷಿಕಾ ಫೈನಲ್ ಹಂತ ತಲುಪಿದ್ದರು. ಈ ಸೀಸನ್ನಲ್ಲಿ ಅತೀ ಹೆಚ್ಚು ವ್ಯಯಕ್ತಿಕ ಅವಾರ್ಡ್ಗಳನ್ನು ರಿಷಿಕಾ ಪಡೆದುಕೊಂಡಿರುವುದು ಅವರ ಮತ್ತೊಂದು ಸಾಧನೆ.
“ರಿಷಿಕಾ ಕುಂದೇಶ್ವರ ಈ ಸೀಸನ್ನ ಫೇವರಿಟ್ ಸ್ಪರ್ಧಿ. ಸ್ಪಷ್ಟತೆಗೆ ಇನ್ನೊಂದು ಹೆಸರೇ ರಿಷಿಕಾ ಎಂದು ಹೇಳಬಹುದು. ರಿಷಿಕಾ ವೇದಿಕೆ ಮೇಲೆ ಬಂದರೆ ಅಲ್ಲೊಂದು ಅದ್ಭುತ ಪರ್ಫಾರ್ಮೆನ್ಸ್ ಖಂಡಿತ ಇರುತ್ತದೆ ಮತ್ತು ಅಲ್ಲಿ ಹುಡುಕಿದರೂ ತಪ್ಪು ಸಿಗಲ್ಲ” ಎಂದು ರವಿಚಂದ್ರನ್ ಹೇಳಿದರೆ, “ರಿಷಿಕಾನ ನಂಬಿ ಯಾವ ಪಾತ್ರವನ್ನಾದರೂ ನೀಡಬಹುದು” ಎಂದು ಲಕ್ಷ್ಮೀ ಹೇಳಿದ್ದಾರೆ. ಉಳಿದ ವಿಜೇತರ ಬಗ್ಗೆಯೂ ತೀರ್ಪುಗಾರರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ರಿಷಿಕಾ ಮಂಗಳೂರಿನ ಪತ್ರಕರ್ತ, ಜಿಲ್ಲಾ ಪತ್ರಕರ್ತ ಸಂಘದ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಹಾಗೂ ಸಂಧ್ಯಾ ದಂಪತಿಯ ಪುತ್ರಿಯಾಗಿದ್ದು, ಕದ್ರಿಯಲ್ಲಿ ವಾಸವಾಗಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…