ಮಂಗಳೂರು:- ಸಕಲ ಜೀವ ರಾಶಿಗಳಿಗೂ ಬದುಕುವ ಹಕ್ಕಿದ್ದು, ಅದನ್ನು ಸಮಾನವಾಗಿ ನೋಡುವ ಚಿಂತನೆ ಜೈನ ಧರ್ಮದಲ್ಲಿ ಒಡಮೂಡಿದೆ. ರಾಜನಾಗಿ ಹುಟ್ಟಿ ಸಕಲವನ್ನೂ ಪರಿತ್ಯಜಿಸಿ ಆತ್ಮ ಸದ್ವಿಚಾರಕ್ಕಾಗಿ ಸತ್ ಚಿಂತನೆಗಳನ್ನು ರೂಢಿಸಿಕೊಂಡ ಭಗವಾನ್ ಮಹಾವೀರರ ತತ್ವಗಳು ಅನುಕರಣನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು.
ಅವರು ಏ.22 ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾವೀರ ಜಯಂತಿಯಲ್ಲಿ ಮಾತನಾಡಿದರು.
ಜಿಲ್ಲಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ನಂತರ ವೇಣೂರಿನ ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಲಭಿಸಿತು ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಅವರು ಮಾತನಾಡಿ, ಶಾಂತಿ ಸ್ಥಾಪನೆಯಲ್ಲಿ ಜೈನ ಧರ್ಮದ ಪಾತ್ರ ಅತ್ಯಂತ ಪ್ರಮುಖವಾದದ್ದು, ಹಲವು ತತ್ವಗಳನ್ನು ನೀಡಿರುವ ಜೈನ ಧರ್ಮದ ಸಾರವನ್ನು ಅವರು ಈ ಸಂದರ್ಭದಲ್ಲಿ ತಿಳಿಸಿಕೊಟ್ಟರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್ ಕೆ., ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಜೈನ ಸಮಾಜದ ಮುಖಂಡರು, ಪದಾಧಿಕಾರಿಗಳು, ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೆ ನೆರವೇರಿಸಿ, ಗೌರವ ಸಮರ್ಪಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಕೌಶಲ್ಯಾಭಿವೃದ್ಧಿ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಅಧಿಕಾರಿ ಪ್ರದೀಪ್ ಡಿಸೋಜಾ, ಜೈನ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್. ಜಿ ಸ್ವಾಗತಿಸಿದರು.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಲಾಯಿತು.
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ…
ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ನೇತ್ರಾವತಿ ಹೊಸ ಸೇತುವೆಯ…
ಸಜೀಪ ಮೂಡದ ಪೆರ್ವ ಸಮೀಪದ ಕೊಯಿಲ ಎಂಬಲ್ಲಿ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಪೆರ್ವ ರಸ್ತೆ…
ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…