ಜನ ಮನದ ನಾಡಿ ಮಿಡಿತ

Advertisement

ಕಟೀಲಿನಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ

ಬಜಪೆ : ವೇದ ಪುರಾಣಗಳ ಮಹತ್ವವನ್ನು ಮಕ್ಕಳಿಗೆ ಕಲಿಸುವ ಪ್ರಕ್ರಿಯೆ ನಿರಂತರವಾಗಿಬೇಕು. ಆ ಮೂಲಕ ಮಕ್ಕಳನ್ನು ಸಂಸ್ಕಾರ ಮತ್ತು ಜ್ಞಾನವಂತರನ್ನಾಗಿಸಬಹುದು ಎಂದು ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ನಿರಂಜನ ಚಿಪಳೂಣಕರ್ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವಸ್ಥಾನ ಹಾಗೂ ಮುಂಬೈನ ಸಂಜೀವನಿ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ವಸಂತವೇದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕ ಚಿಂತಕ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮಾತನಾಡಿ ಶ್ಲೋಕ, ಮಂತ್ರಾದಿಗಳನ್ನು ಕಲಿಸುವ ಕರ್ತವ್ಯ ಹಿರಿಯರಿಗೆ ಇದೆ. ದೇವಸ್ಥಾನಗಳು ಆಧ್ಯಾತ್ಮ ಚಿಂತನೆಯನ್ನು ಮಕ್ಕಳಲ್ಲಿ ಬೆಳೆಸುವ ಕಾರ್ಯ ಅಭಿನಂದನೀಯ ಎಂದರು.
ಸಂಜೀವನಿ ಟ್ರಸ್ಟ್ ನ ಡಾ. ಸುರೇಶ್ ರಾವ್. ಪದವಿ ಕಾಲೇಜು ಪ್ರಾಚಾರ್ಯ ಡಾ. ವಿಜಯ್ ವಿ. ಕಟೀಲು ದೇಗುಲದ ಆಡಳಿತ ಮಂಡಳಿಯ ಪ್ರಮುಖರು, ವೇದ ಶಿಬಿರದ ಗುರುಗಳಾದ ಮಧ್ವೇಶ ಮಠದ ಹಾಗೂ ವಾಗೀಶ ಆಚಾರ್ಯ ಮತ್ತಿತರರಿದ್ದರು.
ಸಂಸ್ಕೃತ ಉಪನ್ಯಾಸಕರಾದ ಡಾ. ಪದ್ಮನಾಭ ಮರಾಠೆ ಸ್ವಾಗತಿಸಿದರು. ಶ್ರೀವತ್ಸ ನಿರೂಪಿಸಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!