ಬಜಪೆ : ವೇದ ಪುರಾಣಗಳ ಮಹತ್ವವನ್ನು ಮಕ್ಕಳಿಗೆ ಕಲಿಸುವ ಪ್ರಕ್ರಿಯೆ ನಿರಂತರವಾಗಿಬೇಕು. ಆ ಮೂಲಕ ಮಕ್ಕಳನ್ನು ಸಂಸ್ಕಾರ ಮತ್ತು ಜ್ಞಾನವಂತರನ್ನಾಗಿಸಬಹುದು ಎಂದು ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ನಿರಂಜನ ಚಿಪಳೂಣಕರ್ ಹೇಳಿದರು.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವಸ್ಥಾನ ಹಾಗೂ ಮುಂಬೈನ ಸಂಜೀವನಿ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ವಸಂತವೇದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕ ಚಿಂತಕ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮಾತನಾಡಿ ಶ್ಲೋಕ, ಮಂತ್ರಾದಿಗಳನ್ನು ಕಲಿಸುವ ಕರ್ತವ್ಯ ಹಿರಿಯರಿಗೆ ಇದೆ. ದೇವಸ್ಥಾನಗಳು ಆಧ್ಯಾತ್ಮ ಚಿಂತನೆಯನ್ನು ಮಕ್ಕಳಲ್ಲಿ ಬೆಳೆಸುವ ಕಾರ್ಯ ಅಭಿನಂದನೀಯ ಎಂದರು.
ಸಂಜೀವನಿ ಟ್ರಸ್ಟ್ ನ ಡಾ. ಸುರೇಶ್ ರಾವ್. ಪದವಿ ಕಾಲೇಜು ಪ್ರಾಚಾರ್ಯ ಡಾ. ವಿಜಯ್ ವಿ. ಕಟೀಲು ದೇಗುಲದ ಆಡಳಿತ ಮಂಡಳಿಯ ಪ್ರಮುಖರು, ವೇದ ಶಿಬಿರದ ಗುರುಗಳಾದ ಮಧ್ವೇಶ ಮಠದ ಹಾಗೂ ವಾಗೀಶ ಆಚಾರ್ಯ ಮತ್ತಿತರರಿದ್ದರು.
ಸಂಸ್ಕೃತ ಉಪನ್ಯಾಸಕರಾದ ಡಾ. ಪದ್ಮನಾಭ ಮರಾಠೆ ಸ್ವಾಗತಿಸಿದರು. ಶ್ರೀವತ್ಸ ನಿರೂಪಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…