ಬಂಟ್ವಾಳ: ಬಿಜೆಪಿಯವರಿಂದ ಜನರಿಗೆ ಮೋಸ ಆಗಿದ್ದು , ಈ ಬಾರಿ ಸಮಗ್ರ ಅಭಿವೃದ್ಧಿಗಾಗಿ ಜನತೆ ಮತ್ತೆ ಕಾಂಗ್ರೇಸ್ ಪಕ್ಷದ ಕೈ ಹಿಡಿಯುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಲೋಕಸಭಾ ಅಭ್ಯರ್ಥಿಯಾಗಲು ಅರ್ಹ ವ್ಯಕ್ತಿಯಾಗಿದ್ದು, ಜನರಲ್ಲಿ ಅವರ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಪ್ರತಿಯೊಬ್ಬ ವ್ಯಕ್ತಿಯೂ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೇಸ್ ನ ಸಂಸದರುಗಳಿಂದ ದ.ಕ.ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿವೆ. ಬಿಜೆಪಿ ಸಂಸದರುಗಳಿಂದ ಹೇಳಿಕೊಳ್ಳುವಂತಹ ಯಾವದೇ ದೊಡ್ಡ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಬಹುತೇಕ ಕಾಂಗ್ರೆಸ್ ನ ಅವಧಿಯಲ್ಲಿ ನಡೆದಿವೆ.
ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳ ಸವಲತ್ತುಗಳನ್ನು ಜನರಿಗೆ ನೀಡಿದೆ ಎಂದು ಅವರು ಇದೀಗ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಕೇಂದ್ರದ ಗ್ಯಾರಂಟಿ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡ ಮತವನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮರಳಿಪಡೆಯುತ್ತೇವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಮೆಲ್ಕಾರ್ ನಿಂದ ಸಜೀಪ ಸುಭಾಷ್ ನಗರದ ವರೆಗೆ ಬೈಕ್ ರ್ಯಾಲಿ ನಡೆದು ಬಳಿಕ ಚುನಾವಣಾ ಬಹಿರಂಗ. ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಚ ಸುದೀಪ್ ಶೆಟ್ಟಿ, ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಶಬೀರ್, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…