ಬಾಗಲಕೋಟ: ಬಿಜೆಪಿಯವರಿಗೆ ಮುಸ್ಲಿಂ ಮತ ಬೇಕಾಗಿಯೇ ಇಲ್ಲ ಇನ್ನು ನಾವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಬಾರದು ಎಂದು ನಿರ್ಣಯಿಸಿದ್ದೇವೆ ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಉಸ್ಮಾನಗಣಿ ಹುಮ್ನಾಬಾದ ಹೇಳಿದರು.

ಬಾಗಲಕೋಟ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಮುಸ್ಲಿಂರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ಸರಕಾರ ಮುಸ್ಲಿಂರನ್ನು 2ಎ ದಿಂದ ಹೊರಗೆ ಇಟ್ಟಿದ್ದರಿಂದ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅದಕ್ಕೆ ಸರಿಯಾದ ಪಾಠ ಕಲಿಸಿದ್ದೇವೆ. ಆದರೆ ಕಾಂಗ್ರೆಸ್ ಸರಕಾರ ಸಹ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳದೇ ವಂಚಿಸಿದೆ. ಪಂಚಮಸಾಲಿ ಸಮಾಜಕ್ಕೆ ಎರಡೂ ಪಕ್ಷಗಳಲ್ಲಿ ಬಲಾಡ್ಯ ನಾಯಕರಿದ್ದಾರೆ. ಕಾಂಗ್ರೆಸ್ಸಿನಲ್ಲಿ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ವಿಜಯಾನಂದ ಕಾಶಪ್ಪನವರ, ಬಿಜೆಪಿಯಲ್ಲಿ ಬಸನಗೌಡ ಪಾಟೀಲ ಯತ್ನಾಳ, ಸೇರಿದಂತೆ ಪ್ರಮುಖ ನಾಯಕರು ಇದ್ದು ಅವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ನಾವೇನು ಮಾಡಬೇಕು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕರು ಸರಿಯಾದ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಈ ಚುನಾವಣೆಯಲ್ಲಿ ಇಬ್ಬರಿಗೂ ಪಾಠ ಕಲಿಸೋಣ. ಅದಕ್ಕಾಗಿ ರಾಜ್ಯಾದ್ಯಂತ ಮುಸ್ಲಿಂ ನಾಯಕರು ನಿರ್ಧರಿಸಬೇಕು ಎಂದು ಹೇಳಿದರು



