ಬಾಗಲಕೋಟ: ಬಿಜೆಪಿಯವರಿಗೆ ಮುಸ್ಲಿಂ ಮತ ಬೇಕಾಗಿಯೇ ಇಲ್ಲ ಇನ್ನು ನಾವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಬಾರದು ಎಂದು ನಿರ್ಣಯಿಸಿದ್ದೇವೆ ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಉಸ್ಮಾನಗಣಿ ಹುಮ್ನಾಬಾದ ಹೇಳಿದರು.
ಬಾಗಲಕೋಟ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಮುಸ್ಲಿಂರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ಸರಕಾರ ಮುಸ್ಲಿಂರನ್ನು 2ಎ ದಿಂದ ಹೊರಗೆ ಇಟ್ಟಿದ್ದರಿಂದ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅದಕ್ಕೆ ಸರಿಯಾದ ಪಾಠ ಕಲಿಸಿದ್ದೇವೆ. ಆದರೆ ಕಾಂಗ್ರೆಸ್ ಸರಕಾರ ಸಹ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳದೇ ವಂಚಿಸಿದೆ. ಪಂಚಮಸಾಲಿ ಸಮಾಜಕ್ಕೆ ಎರಡೂ ಪಕ್ಷಗಳಲ್ಲಿ ಬಲಾಡ್ಯ ನಾಯಕರಿದ್ದಾರೆ. ಕಾಂಗ್ರೆಸ್ಸಿನಲ್ಲಿ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ವಿಜಯಾನಂದ ಕಾಶಪ್ಪನವರ, ಬಿಜೆಪಿಯಲ್ಲಿ ಬಸನಗೌಡ ಪಾಟೀಲ ಯತ್ನಾಳ, ಸೇರಿದಂತೆ ಪ್ರಮುಖ ನಾಯಕರು ಇದ್ದು ಅವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ನಾವೇನು ಮಾಡಬೇಕು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕರು ಸರಿಯಾದ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಈ ಚುನಾವಣೆಯಲ್ಲಿ ಇಬ್ಬರಿಗೂ ಪಾಠ ಕಲಿಸೋಣ. ಅದಕ್ಕಾಗಿ ರಾಜ್ಯಾದ್ಯಂತ ಮುಸ್ಲಿಂ ನಾಯಕರು ನಿರ್ಧರಿಸಬೇಕು ಎಂದು ಹೇಳಿದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…