ಮಂಗಳೂರು: ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಹತ್ತು ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…