ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುಗವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು÷ ಒಂದು ಕಡೆ ಹಾಗೂ ಜಿಲ್ಲೆಯ ಬಿಜೆಪಿಯ ಎಲ್ಲಾ ಶಾಸಕರು, ಸಂಸದರು ಮತ್ತು ಮುಖಂಡರನ್ನು ಒಂದು ಕಡೆ ನಿಂತು ಚರ್ಚೆಗೆ ಬರಲಿ. ಅವರು ಮಾಡಿರುವ ಹಿಂದುತ್ವದ ಕೆಲಸ ಮತ್ತು ನಾವು ಮಾಡಿರುವ ಹಿಂದುತ್ವದ ಕೆಲಸಗಳ ಬಗ್ಗೆ ಚರ್ಚೆಯಾಗಲಿ. ಬಿಜೆಪಿಗರದ್ದು ನಕಲಿ ಹಿಂದುತ್ವ. ಇನ್ನೊಂದು ಧರ್ಮವನ್ನು ಗೌರವಿಸುವುದೇ ನಿಜವಾದ ಹಿಂದುತ್ವ. ರಾಜಕೀಯ ಲಾಭಕ್ಕಾಗಿ ಅವರಿಂದ ಹಿಂದುತ್ವದ ಬಳಕೆಯಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಅಡಳಿತದ ಸಂದರ್ಭದಲ್ಲಿ ೪೦% ಕಮೀಷನ್ ಸೇರಿದಂತೆ ಬಡವರ ರಕ್ತ ಹೀರಿದ್ದ ಬಿಜೆಪಿಗೆ ದೇವರು ಉತ್ತಮ ಪ್ರತಿಫಲವನ್ನು ನೀಡಿದ್ದಾರೆ. ಕಾಂಗ್ರೆಸ್ಗೆ ದೇವರು ಅನುಗ್ರಹಿಸಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳು ಹೊರಗೆ ಹೋದರೆ ಮತ್ತೆ ಮನೆಗೆ ಬರುವ ಸ್ಥಿತಿ ಇಲ್ಲದಂತಾಗುತ್ತದೆ. ಯುವಕರು ಜೈಲು ಪಾಲಾಗುತ್ತಾರೆ ಎಂದೆಲ್ಲಾ ಬಿಜೆಪಿ ಪ್ರಚಾರ ನಡೆಸಿತ್ತು. ಆದರೆ ಇದೀಗ ಸರ್ಕಾರ ಗ್ಯಾರಂಟಿಯ ಕಾರಣದಿಂದಾಗಿ ಹೆಣ್ಣು ಮಕ್ಕಳು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿಗಳಾಗಿದ್ದಾರೆ. ಯುವಕರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಗ್ಯಾರಂಟಿ ಮೂಲಕ ನೀಡಿದೆ ಎಂದರು.
ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್,ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ವಿ,ಪಕ್ಷದ ಮುಖಂಡರಾದ ಚಂದ್ರಹಾಸ ಶೆಟ್ಟಿ, ಶಾರದಾ ಅರಸ್, ಮುರಳೀಧರ ರೈ ಮಠಂತಬೆಟ್ಟು, ಎಚ್. ಮಹಮ್ಮದ್ ಆಲಿ, ಪ್ರಸಾದ್ ಕೌಶಲ್ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಉಲ್ಲಾಸ್ ಕೋಟ್ಯಾನ್, ಶಕೂರ್ ಹಾಜಿ, ನಿರ್ಮಲ್ ಕುಮಾರ್ ಜೈನ್, ಶೀನಪ್ಪ ಗೌಡ, ಬೆಟ್ಟ ಈಶ್ವರ ಭಟ್, ನೂರುದ್ದೀನ್ ಸಾಲ್ಮರ, ಶಿವರಾಮ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…