ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುಗವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು÷ ಒಂದು ಕಡೆ ಹಾಗೂ ಜಿಲ್ಲೆಯ ಬಿಜೆಪಿಯ ಎಲ್ಲಾ ಶಾಸಕರು, ಸಂಸದರು ಮತ್ತು ಮುಖಂಡರನ್ನು ಒಂದು ಕಡೆ ನಿಂತು ಚರ್ಚೆಗೆ ಬರಲಿ. ಅವರು ಮಾಡಿರುವ ಹಿಂದುತ್ವದ ಕೆಲಸ ಮತ್ತು ನಾವು ಮಾಡಿರುವ ಹಿಂದುತ್ವದ ಕೆಲಸಗಳ ಬಗ್ಗೆ ಚರ್ಚೆಯಾಗಲಿ. ಬಿಜೆಪಿಗರದ್ದು ನಕಲಿ ಹಿಂದುತ್ವ. ಇನ್ನೊಂದು ಧರ್ಮವನ್ನು ಗೌರವಿಸುವುದೇ ನಿಜವಾದ ಹಿಂದುತ್ವ. ರಾಜಕೀಯ ಲಾಭಕ್ಕಾಗಿ ಅವರಿಂದ ಹಿಂದುತ್ವದ ಬಳಕೆಯಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಅಡಳಿತದ ಸಂದರ್ಭದಲ್ಲಿ ೪೦% ಕಮೀಷನ್ ಸೇರಿದಂತೆ ಬಡವರ ರಕ್ತ ಹೀರಿದ್ದ ಬಿಜೆಪಿಗೆ ದೇವರು ಉತ್ತಮ ಪ್ರತಿಫಲವನ್ನು ನೀಡಿದ್ದಾರೆ. ಕಾಂಗ್ರೆಸ್ಗೆ ದೇವರು ಅನುಗ್ರಹಿಸಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳು ಹೊರಗೆ ಹೋದರೆ ಮತ್ತೆ ಮನೆಗೆ ಬರುವ ಸ್ಥಿತಿ ಇಲ್ಲದಂತಾಗುತ್ತದೆ. ಯುವಕರು ಜೈಲು ಪಾಲಾಗುತ್ತಾರೆ ಎಂದೆಲ್ಲಾ ಬಿಜೆಪಿ ಪ್ರಚಾರ ನಡೆಸಿತ್ತು. ಆದರೆ ಇದೀಗ ಸರ್ಕಾರ ಗ್ಯಾರಂಟಿಯ ಕಾರಣದಿಂದಾಗಿ ಹೆಣ್ಣು ಮಕ್ಕಳು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿಗಳಾಗಿದ್ದಾರೆ. ಯುವಕರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಗ್ಯಾರಂಟಿ ಮೂಲಕ ನೀಡಿದೆ ಎಂದರು.
ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್,ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ವಿ,ಪಕ್ಷದ ಮುಖಂಡರಾದ ಚಂದ್ರಹಾಸ ಶೆಟ್ಟಿ, ಶಾರದಾ ಅರಸ್, ಮುರಳೀಧರ ರೈ ಮಠಂತಬೆಟ್ಟು, ಎಚ್. ಮಹಮ್ಮದ್ ಆಲಿ, ಪ್ರಸಾದ್ ಕೌಶಲ್ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಉಲ್ಲಾಸ್ ಕೋಟ್ಯಾನ್, ಶಕೂರ್ ಹಾಜಿ, ನಿರ್ಮಲ್ ಕುಮಾರ್ ಜೈನ್, ಶೀನಪ್ಪ ಗೌಡ, ಬೆಟ್ಟ ಈಶ್ವರ ಭಟ್, ನೂರುದ್ದೀನ್ ಸಾಲ್ಮರ, ಶಿವರಾಮ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…