ಸ್ಫೋರ್ಟ್ಸ್ ಕ್ಲಬ್ ನ ವತಿಯಿಂದ ಮಕ್ಕಳಿಗೆ ಇನ್ನಷ್ಟು ಕಾರ್ಯಕ್ರಮಗಳು ಮೂಡಿಬರಲಿ – ಶ್ರೀ ರಮೇಶ್ ಅಮೀನ್ ಮುಂಬೈ.
ಜಿಲ್ಲಾ,ರಾಜ್ಯ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021 ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ,
▪️ದಿನಾಂಕ : 21.04.2024, ರವಿವಾರ ಬೆಳಿಗ್ಗೆ ಘಂಟೆ 9.00 ಕ್ಕೆ ಸ್ಪೋರ್ಟ್ಸ್ ಕ್ಲಬ್ ನ ಸಭಾಂಗಣದಲ್ಲಿ ಎಪ್ರಿಲ್ 14 ನೇ ತಾರೀಕಿನಿಂದ 21 ರ ವರೆಗೆ ನಡೆಸಲಾದ ಉಚಿತ “ಮಕ್ಕಳ ಬೇಸಿಗೆ ಶಿಬಿರ” ದ ಸಮಾರೋಪ ಸಮಾರಂಭ ಹಾಗೂ ಮಕ್ಕಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನೆರವೇರಿತು.
▪️ ಮುಖ್ಯ ವೇದಿಕೆಯಲ್ಲಿ ಬೇಸಿಗೆ ಶಿಬಿರದ ತರಬೇತುದಾರರಾಗಿ ಸಹಕರಿಸಿದ ಶ್ರೀ ಸುಹಾಸ್ ನಾನಿಲ್,ಶ್ರೀ ಅಜಿತ್ ಕೆರೆಕಾಡು, ಶ್ರೀ ನವೀನ್ ಪೂಜಾರಿ ಕೊಡೆತ್ತೂರು,ಶ್ರೀ ಕಿರಣ್ ತುಳುವ, ಶ್ರೀಮತಿ ಜಯಲಕ್ಷ್ಮಿ.ಎಸ್, ಶ್ರೀ ಸುಶನ್ ದೇವಾಡಿಗ, ಕುಮಾರಿ ಆಕ್ಷಿತಾ, ಕುಮಾರಿ ಪಲ್ಲವಿ, ತಮ್ಮ ತಮ್ಮ ಅನುಭವಗಳನ್ನು ಮಕ್ಕಳೊಂದಿಗೆ ಹಂಚಿಕೊಂಡರು.
▪️ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್ , ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.
▪️ಸಂಸ್ಥೆಯ ಗೌರವ ಮಾರ್ಗದರ್ಶಕರಾದ ಶ್ರೀ ರಮೇಶ್ ಅಮೀನ್ ಮುಂಬೈ ಇವರು ಸಂಸ್ಥೆಯು 7 ದಿನಗಳಲ್ಲಿ ಉತ್ತಮವಾಗಿ ಶಿಬಿರವನ್ನು ಸಂಘಟಿಸಿದೆ. ಮಕ್ಕಳಿಗೆ ತರಬೇತಿ ಚೆನ್ನಾಗಿ ನಡೆದಿರುವುದು ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಈ ಸಂಸ್ಥೆಯಿಂದ ಮಕ್ಕಳಿಗೆ ಇನ್ನಷ್ಟು ಕಾರ್ಯಕ್ರಮಗಳು ಮೂಡಿಬರಲಿ ಎಂದರು.
▪️ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಮಾರ್ಗದರ್ಶಕರಾದ ಶ್ರೀ ಯೋಗೀಶ್ ಕೋಟ್ಯಾನ್,ಸಂಸ್ಥೆಯ ನಿಕಟ ಪೂರ್ವ ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ಶ್ರೀ ಸಂತೋಷ್ ದೇವಾಡಿಗ,ನಿಕಟ ಪೂರ್ವ ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಶೋಭಾ.ವಿ.ಅಂಚನ್, ಮಹಿಳಾ ಕಾರ್ಯದರ್ಶಿ ಶ್ರೀಮತಿ ಸುರೇಖಾ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ.ಜೆ.ಪಿ, ನಿಕಟ ಪೂರ್ವ ಮಹಿಳಾ ಕಾರ್ಯದರ್ಶಿ ಶ್ರೀಮತಿ ನೀಮಾ ಸನಿಲ್, ಮಾಜಿ ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ವಾಣಿ ಮಹೇಶ್, ಮಹಿಳಾ ಸದಸ್ಯೆಯರಾದ ಶ್ರೀಮತಿ ಸುಜಾತಾ ಜಿ.ಕೆ.,ಶ್ರೀಮತಿ ಚಂದ್ರಿಕಾ ಎಸ್, ಮತ್ತು ಸದಸ್ಯರು,ಸದಸ್ಯೆಯರು,ಮಕ್ಕಳು, ಪೋಷಕರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
▪️ಸುಮಾರು 70 ಮಕ್ಕಳು ಈ ಬೇಸಿಗೆ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು ಹಾಗೂ ಸಂಸ್ಥೆಯ ಗೌರವ ಮಾರ್ಗದರ್ಶಕರು ಹಾಗೂ ತನು ಎಲೆಕ್ಟ್ರಿಕಲ್ಸ್ ನ ಮಾಲಕರು ಶ್ರೀ ಅಜಿತ್ ಕೆರೆಕಾಡು ಇವರ ವತಿಯಿಂದ ಶಾಲಾ ಪರಿಕರಗಳನ್ನು ಒಳಗೊಂಡ ಕಿಟ್ಗಳನ್ನು ಎಲ್ಲಾ ಮಕ್ಕಳಿಗೆ ನೀಡಿದರು.
▪️ಬೇಸಿಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಕ್ಕಳಿಗೆ ನೃತ್ಯ ಕರಾಟೆ ಚಿತ್ರಕಲೆ ಇನ್ನಿತರ ವಿಷಯಗಳಲ್ಲಿ ತರಬೇತಿ ನೀಡಿರುವವರಿಗೆ ಸಂಸ್ಥೆಯ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
▪️ಮಕ್ಕಳು ಶಿಬಿರದ ಬಗ್ಗೆ ತಮ್ಮ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು
▪️ ನಿಯತಿ ಎಂ. ಅಂಚನ್ ಮತ್ತು ನಿಮೋಕ್ಷ ಎಂ.ಅಂಚನ್ ಪ್ರಾರ್ಥಿಸಿದರು.
▪️ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು.
▪️ಪ್ರಧಾನ ಕಾರ್ಯದರ್ಶಿ ಶ್ರೀ ದೀಪಕ್ ಸುವರ್ಣ ವಂದಿಸಿದರು.
▪️ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಗೀತಾ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.
▪️ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯ ಗೊಳಿಸಲಾಯಿತು.
▪️ ಶ್ರೀ ರಾಜೇಶ್ ಕುಲಾಲ್, ಶ್ರೀ ಮನೋಜ್ ಕಿರೋಡಿಯನ್,ಶ್ರೀ ನಾಗೇಶ್ ಶೆಟ್ಟಿಗಾರ್ ಉಪಹಾರದ ವ್ಯವಸ್ಥೆಗೆ ಸಹಕರಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…