ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ…..!!

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಕೆಲವು ಮತಗಟ್ಟೆಯಲ್ಲಿ ಪ್ರಾರಂಭದಲ್ಲಿ ಮತಯಂತ್ರಗಳು ಕೈ ಕೊಟ್ಟರೆ ಇನ್ನು‌ಕೆಲವು ಕಡೆಗಳ ಮತಯಂತ್ರಗಳು ಮಧ್ಯಾಹ್ನ ವೇಳೆ ಕೆಟ್ಟು ಹೋಗಿದೆ.


ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕೈಕುಂಜೆ ಎ.ಪಿ.ಎಂ.ಸಿ. ಮತಗಟ್ಟೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ 12.30 ರ ವರೆಗೆ ಅರ್ಧ ತಾಸುಗಳ ಕಾಲ ಯಂತ್ರ ಸ್ಥಗಿತಗೊಂಡ ಘಟನೆ ನಡೆಯಿತು.ಬಳಿಕ ಹೊಸ ಯಂತ್ರವನ್ನು ತರಿಸಿ , ಮತದಾನ ಮಾಡಲಾಗಿದೆ. ಇದೇ ರೀತಿ ಬಿ.ಸಿ.ರೋಡಿನ ಅಜ್ಜಿಬೆಟ್ಟು ಎಂಬಲ್ಲಿ ಸರಕಾರಿ ಶಾಲೆಯಲ್ಲಿನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, 11 ಗಂಟೆಯಿಂದ 11.20 ರ ವರೆಗೆ 20 ನಿಮಿಷಗಳ ಕಾಲ ಮತದಾನ ಸ್ಥಗಿತಗೊಂಡಿತ್ತು. ಬಳಿಕ ಟೆಕ್ನೀಷಿಯನ್ ಬಂದು ಯಂತ್ರದ ರಿಪೇರಿ ಮಾಡಿ ಮತ್ತೆ ಮತದಾನ ಪ್ರಕ್ರಿಯೆ ಮುಂದುವರಿಯಿತು.


ಕೈಕೊಟ್ಟ ಕರೆಂಟ್
ಲೋಕಸಭಾ ಸಭಾ ಚುನಾವಣೆ ನಡೆಯುತ್ತಿರುವ ವೇಳೆ ಕರೆಂಟ್ ಅವಾಗ ಅವಾಗ ಕಣ್ಣು ಮುಚ್ಚಾಲೆ ಆಟ ಆಡುವುದು ಕಂಡು ಬಂತು. ಕೊಠಡಿಯೊಳಗೆ ಪ್ಯಾನ್ ಇಲ್ಲದೆ ಕೂರಲು ಸಾಧ್ಯವಾಗದ ಸಮಯದಲ್ಲಿ ‌ಕರೆಂಟ್ ಕೈ ಕೊಟ್ಟಿರುವುದು ಸಾಕಷ್ಟು ತೊಂದರೆ ಉಂಟು‌ಮಾಡಿತ್ತು. ಇನ್ನೊಂದು ಕಡೆಯಿಂದ ಕೊಠಡಿಗಳು ಕತ್ತಲೆಯಾಗಿದ್ದು,ಮತದಾನ ಮಾಡಲು ಯಂತ್ರಗಳು ಸರಿಯಾಗಿ ಕಾಣಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ.


ಉಳಿದ ದಿನಗಳಲ್ಲಿ ‌ಕರೆಂಟ್ ನ ಪವರ್ ‌ಕಟ್ ಆಟಗಳು ನಡೆಯುತ್ತಿರುವ ವಿಚಾರ ಸಾಮಾನ್ಯವಾದರೂ, ಇವತ್ತು ‌ಚುನಾವಣೆಯ ದೃಷ್ಟಿಯಿಂದ ಇಡೀ ದಿನ ಪವರ್ ಕಟ್ ಮಾಡದೆ ಕರೆಂಟ್ ನೀಡಬೇಕಿತ್ತು ಎಂಬು ಮಾತುಗಳು ಸಾರ್ವಜನಿಕ ವಲಯದಲ್ಲಿ ‌ಕೇಳಿ ಬಂತು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!