ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಕೆಲವು ಮತಗಟ್ಟೆಯಲ್ಲಿ ಪ್ರಾರಂಭದಲ್ಲಿ ಮತಯಂತ್ರಗಳು ಕೈ ಕೊಟ್ಟರೆ ಇನ್ನುಕೆಲವು ಕಡೆಗಳ ಮತಯಂತ್ರಗಳು ಮಧ್ಯಾಹ್ನ ವೇಳೆ ಕೆಟ್ಟು ಹೋಗಿದೆ.
ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕೈಕುಂಜೆ ಎ.ಪಿ.ಎಂ.ಸಿ. ಮತಗಟ್ಟೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ 12.30 ರ ವರೆಗೆ ಅರ್ಧ ತಾಸುಗಳ ಕಾಲ ಯಂತ್ರ ಸ್ಥಗಿತಗೊಂಡ ಘಟನೆ ನಡೆಯಿತು.ಬಳಿಕ ಹೊಸ ಯಂತ್ರವನ್ನು ತರಿಸಿ , ಮತದಾನ ಮಾಡಲಾಗಿದೆ. ಇದೇ ರೀತಿ ಬಿ.ಸಿ.ರೋಡಿನ ಅಜ್ಜಿಬೆಟ್ಟು ಎಂಬಲ್ಲಿ ಸರಕಾರಿ ಶಾಲೆಯಲ್ಲಿನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, 11 ಗಂಟೆಯಿಂದ 11.20 ರ ವರೆಗೆ 20 ನಿಮಿಷಗಳ ಕಾಲ ಮತದಾನ ಸ್ಥಗಿತಗೊಂಡಿತ್ತು. ಬಳಿಕ ಟೆಕ್ನೀಷಿಯನ್ ಬಂದು ಯಂತ್ರದ ರಿಪೇರಿ ಮಾಡಿ ಮತ್ತೆ ಮತದಾನ ಪ್ರಕ್ರಿಯೆ ಮುಂದುವರಿಯಿತು.
ಕೈಕೊಟ್ಟ ಕರೆಂಟ್
ಲೋಕಸಭಾ ಸಭಾ ಚುನಾವಣೆ ನಡೆಯುತ್ತಿರುವ ವೇಳೆ ಕರೆಂಟ್ ಅವಾಗ ಅವಾಗ ಕಣ್ಣು ಮುಚ್ಚಾಲೆ ಆಟ ಆಡುವುದು ಕಂಡು ಬಂತು. ಕೊಠಡಿಯೊಳಗೆ ಪ್ಯಾನ್ ಇಲ್ಲದೆ ಕೂರಲು ಸಾಧ್ಯವಾಗದ ಸಮಯದಲ್ಲಿ ಕರೆಂಟ್ ಕೈ ಕೊಟ್ಟಿರುವುದು ಸಾಕಷ್ಟು ತೊಂದರೆ ಉಂಟುಮಾಡಿತ್ತು. ಇನ್ನೊಂದು ಕಡೆಯಿಂದ ಕೊಠಡಿಗಳು ಕತ್ತಲೆಯಾಗಿದ್ದು,ಮತದಾನ ಮಾಡಲು ಯಂತ್ರಗಳು ಸರಿಯಾಗಿ ಕಾಣಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ.
ಉಳಿದ ದಿನಗಳಲ್ಲಿ ಕರೆಂಟ್ ನ ಪವರ್ ಕಟ್ ಆಟಗಳು ನಡೆಯುತ್ತಿರುವ ವಿಚಾರ ಸಾಮಾನ್ಯವಾದರೂ, ಇವತ್ತು ಚುನಾವಣೆಯ ದೃಷ್ಟಿಯಿಂದ ಇಡೀ ದಿನ ಪವರ್ ಕಟ್ ಮಾಡದೆ ಕರೆಂಟ್ ನೀಡಬೇಕಿತ್ತು ಎಂಬು ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…