ಮುಲ್ಕಿ:ಕಿನ್ನಿಗೋಳಿ ಸಮೀಪದ ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ದಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ನರಹರಿ ತಂತ್ರಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ನವಕ ಪ್ರಧಾನ, ಮಹಾಪೂಜೆ, ಮಧ್ಯಾಹ್ನ ಶ್ರೀ ದೇವರ ಹಗಲು ರಥೋತ್ಸವ , ಪಲ್ಲ ಪೂಜೆ,ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವರ ಉತ್ಸವ ಬಲಿ, ಪಡು ಸವಾರಿ,ಶ್ರೀ ಭೂತ ಬಲಿ ಕವಾಟ ಬಂಧನ,ಶಯನೋತ್ಸವ ನಡೆಯಿತು
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ದಿನೇಶ್ ಬಂಡ್ರಿಯಾಲ್ ಎಳತ್ತೂರು ಗುತ್ತು, ಬಾಲಕೃಷ್ಣ ಯಾನೆ ಶಂಕರ್ ರೈ,ಗುಣಪಾಲ ಶೆಟ್ಟಿ
ಮತ್ತಿತರರು ಉಪಸ್ಥಿತರಿದ್ದರು
ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಎ.27ರಂದು ಬೆಳಿಗ್ಗೆ ಕವಾಟೋದ್ಘಾಟನೆ, ತುಲಾಭಾರ ಸೇವೆ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ರಥೋತ್ಸವ ನಡೆಯಲಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…