ಉಳ್ಳಾಲ: ಇಬ್ಬರು ಮಕ್ಕಳ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಸಂಭವಿಸಿದೆ. ಘಟನೆ ಬೆನ್ನಲ್ಲೇ ಪತ್ನಿಯೂ ಆತ್ಮಹತ್ಯೆ ಗೆ ಯತ್ನಿಸುತ್ತಿರುವುದನ್ನು ಸ್ಥಳೀಯರು ತಡೆಹಿಡಿದಿದ್ದಾರೆ.ಸ್ವಸಹಾಯ ಸಂಘಕ್ಕೆ ಸಂಬಂಧಿಸಿದ ಹಣ ಬಾಕಿಯಿಂದ ನೊಂದು ಆತ್ಮಹತ್ಯೆ ಗೈದಿರುವುದಾಗಿ ತಿಳಿದುಬಂದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಯೋಗೀಶ್(44)ಆತ್ಮ ಹತ್ಯೆಗೈದವರು..ಸೆಂಟ್ರಿಂಗ್ ಕೆಲಸ ನಿರ್ವಹಿತ್ತಿದ್ದ ಯೋಗೀಶ್ ಇಂದು ಬೆಳಿಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾರೆ.
ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂ. ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರಂತೆ.ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಿಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ತಿಳಿಸಿದ್ದಾರೆ.ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ;
ಯೋಗೀಶ್ ಸಾವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹತ್ಯೆಗೈಯಲು ಮುಂದಾಗಿದ್ದಾರೆ.ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ.ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು,ಪತ್ನಿ,ತಾಯಿಯನ್ನು ಅಗಲಿದ್ದಾರೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…