ಜನ ಮನದ ನಾಡಿ ಮಿಡಿತ

Advertisement

ತೋಕೂರು ಸ್ಫೋರ್ಟ್ಸ್ ಕ್ಲಬ್ ನ ಸದಸ್ಯರಿಂದ ಶ್ರಮದಾನ : ಸ್ಪೋರ್ಟ್ ಕ್ಲಬ್ ನ ಕಾರ್ಯ ಶ್ಲಾಘನೀಯ : ರಾಘವ ಜಿ.ಹೆಬ್ಬಾರ್

ಮುಲ್ಕಿ : ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ,ದ. ಕ, ಜಿಲ್ಲೆ, ಇದರ ಸಹಕಾರದಲ್ಲಿ,ಜಿಲ್ಲಾ , ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ,ಇದರ ಆಶ್ರಯದಲ್ಲಿ ತೋಕೂರು ಗ್ರಾಮದ 2ನೇ ವಾರ್ಡಿನ ದೇನೊಟ್ಟು ರಾಘವ ಹೆಬ್ಬಾರರ ಮನೆಯ ಬಳಿ ಪರಂಬೋರು ತೋಡಿನ ಕಿಂಡಿ ಅಣೆಕಟ್ಟುವಿನಲ್ಲಿ ಕೃಷಿಕರ ಅನುಕೂಲಕ್ಕಾಗಿ ನೀರು ಉಳಿಸುವ ಉದ್ದೇಶದಿಂದ ಕಳೆದ ವರ್ಷ ಡಿ. ತಿಂಗಳಿನಲ್ಲಿ ಕಿಂಡಿ ಅಣೆಕಟ್ಟುವಿಗೆ ಅಡ್ಡ ಹಲಗೆಗಳನ್ನು ಇಟ್ಟು ಮಣ್ಣು, ಬೈಹುಲ್ಲು ತುಂಬಿಸಿ ನೀರನ್ನು ತಡೆ ಹಿಡಿಯಲಾಗಿತ್ತು.

▪️ದಿನಾಂಕ 28-4-2024 ರವಿವಾರ ,ಬೆಳಿಗ್ಗೆ ಘಂಟೆ 7:30ರಿಂದ ಕಿಂಡಿ ಅಣೆಕಟ್ಟಿಗೆ ಹಾಕಿದ್ದ ಹಲಗೆಗಳನ್ನು ತೆಗೆದು ಮತ್ತು ರಾಜ ಕಾಲುವೆಯಲ್ಲಿ ಸಂಗ್ರಹವಾದ ಮರದ ಕೊಂಬೆಗಳನ್ನು,ತ್ಯಾಜ್ಜ ವಸ್ತುಗಳನ್ನು ಹೊರ ತೆಗೆದು ಸ್ವಚ್ಛ ಗೊಳಿಸುವುದರ ಮೂಲಕ ಮಳೆಗಾಲದ ನೀರು ಸರಾಗವಾಗಿ ಹರಿಯಲು ಅನುವು ಮಾಡಿ ಕೊಡಲಾಯಿತು.

▪️ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಇದರ ಸದಸ್ಯರಾದ ಶ್ರೀ ಮೋಹನದಾಸ್, ಸಂತೋಷ್ ಕುಮಾರ್ ಸಂಸ್ಥೆಯ ಅಧ್ಯಕ್ಷ ಶ್ರೀ ಜಗದೀಶ್ ಕುಲಾಲ್,ಕಾರ್ಯಾಧ್ಯಕ್ಷ ಶ್ರೀ ಸಂತೋಷ್ ದೇವಾಡಿಗ , ನಿಕಟ ಪೂರ್ವ ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ, ಪರಿಸರ ಸಂರಕ್ಷಣಾ ಕಾರ್ಯದರ್ಶಿ ಶ್ರೀ ಜಗದೀಶ್ ಕೋಟ್ಯಾನ್,ಸದಸ್ಯರಾದ ಶ್ರೀ ದರ್ಮಾನಂದ ಶೆಟ್ಟಿಗಾರ್,ಶ್ರೀ ಚಂದ್ರಶೇಖರ್ ದೇವಾಡಿಗ,ಗ್ರಾಮಸ್ಥರಾದ ಶ್ರೀ ರಾಘವ.ಜಿ.ಹೆಬ್ಬಾರ್,ಶ್ರೀ ರಮೇಶ್ ಕುಲಾಲ್,ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!