ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಎಂದು ಗುರುತಿಸಲಾಗಿದೆ. ಇವರ ಸ್ನೇಹಿತರಾದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು.
ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ಹಾಗೂ ಕೋಟ ಪೊಲೀಸ್ ಠಾಣಾಧಿಕಾರಿ ತೇಜಸ್ವಿ, ಸಿಬಂದಿ ಪ್ರಸನ್ನ, ಕೃಷ್ಣ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಂದಾಗಿ ಮುರ್ಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…