ಜನ ಮನದ ನಾಡಿ ಮಿಡಿತ

Advertisement

‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್!!

ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್​ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.

ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!