ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.
ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.
ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…