ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.
ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.
ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…