ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.
ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.
ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…