ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ
ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ: ಸಿ.ಎಂ.ಕರೆ ಹುಬ್ಬಳ್ಳಿಯಲ್ಲಿ ಸೋತ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ: ಸಿ.ಎಂ.ಸಿದ್ದರಾಮಯ್ಯ
ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ: ಸಿ.ಎಂ ವ್ಯಂಗ್ಯ
ಬೆಳಗಾವಿ (ಯರಗಟ್ಟಿ) ಏ 28: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್
ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ: ಇವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗತ್ತೆ ಎಂದರು.
ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಓಡೋಗೋದು
ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ.
ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ. ಹತ್ತತ್ತು ವರ್ಷ ಮೋದಿ ಬರೀ ಸುಳ್ಳು ಹೇಳಿಕೊಂಡು ತಿರುಗಿದ್ದು ಬಿಟ್ಟರೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ ಎಂದರು.
ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಈಗ ನಿಂತೋಗತ್ತೆ ಎಂದು ಸುಳ್ಳು ಹೇಳುತ್ತಿದ್ದಾರೆ
ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಆಗಲೇ ತೆಗೆದಿಟ್ಟಿದ್ದೀವಿ ಎಂದರು.
ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ , ಬೈರತಿ ಸುರೇಶ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…