ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯಡಿ ಪರಿಹಾರ ಕೋರಿ ಮೇಲ್ಮನವಿ ಸಲ್ಲಿಸುವ ಹಿರಿಯ ನಾಗರಿಕರಿಗೆ ವಕೀಲರ ಮೂಲಕ ಪ್ರತಿನಿಧಿಸಿಕೊಳ್ಳುವ ಹಕ್ಕಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಬೆಂಗಳೂರು: ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯಡಿ ಪರಿಹಾರ ಕೋರಿ ಉಪ ವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಮುಂದೆ ಅರ್ಜಿ ಅಥವಾ ಮೇಲ್ಮನವಿ ಸಲ್ಲಿಸುವ ಹಿರಿಯ ನಾಗರಿಕರು ವಕೀಲರ ಮೂಲಕ ಪ್ರತಿನಿಧಿಸಿಕೊಳ್ಳುವ ಹಕ್ಕು ಹೊಂದಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ತಮ್ಮ ಆಸ್ತಿಯನ್ನು ಮಕ್ಕಳು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಮೇಲ್ಮನವಿಯ ಸಂಬಂಧ ತಮ್ಮನ್ನು ವಕೀಲರು ಪ್ರತಿನಿಧಿಸಲು ಅನುಮತಿ ನೀಡಬೇಕೆಂಬ ಮನವಿಯನ್ನು ಉಡುಪಿ ಜಿಲ್ಲಾಧಿಕಾರಿಗಳು ತಿರಸ್ಕರಿಸಿ ಆದೇಶಿಸಿದ್ದರು.
ಈ ಆದೇಶ ರದ್ದು ಕೋರಿ ಪುತ್ತೂರು ತಾಲೂಕಿನ ನಿವಾಸಿ ಕೆ. ಶ್ರೀನಿವಾಸ್ ಗಾಣಿಗ (82) ಎಂಬವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.
ಅಲ್ಲದೆ, ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯ ಸಲ್ಲಿಕೆಯಾದ ಅರ್ಜಿ ಮತ್ತು ಮೇಲ್ಮನವಿಯ ಸಂಬಂಧ ಪಕ್ಷಗಾರರಾದ ಹಿರಿಯ ನಾಗರಿಕರು ನೇರವಾಗಿ ಮನವಿ ಸಲ್ಲಿಸಬೇಕು. ಯಾವುದೇ ವಕೀಲರನ್ನು ಪ್ರತಿನಿಧಿಸಬಾರದು ಎಂಬುದನ್ನು ಕಡ್ಡಾಯಗೊಳಿಸಿರುವ ಕಾಯ್ದೆಯ ಸೆಕ್ಷನ್ 17, ವಕೀಲರ ಕಾಯ್ದೆ ಸೆಕ್ಷನ್ 30ಕ್ಕೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ಘೋಷಿಸಿದೆ.
ಅಷ್ಟೇ ಅಲ್ಲದೆ, ಆ ಸೆಕ್ಷನ್ ಜಾರಿಗೊಳಿಸದಂತೆ ಆದೇಶಿಸಿದೆ. ಪ್ರಕರಣದಲ್ಲಿ ಶ್ರೀನಿವಾಸ್ ಅವರನ್ನು ವಕೀಲರು ಪ್ರತಿನಿಧಿಸುವಂತಿಲ್ಲ ಎಂದು ತಿಳಿಸಿ ಜಿಲ್ಲಾಧಿಕಾರಿ 2023ರ ಫೆ.21ರಂದು ನೀಡಿದ್ದ ಹಿಂಬರಹವನ್ನೂ ರದ್ದುಪಡಿಸಿ ಆದೇಶಿಸಿದ್ದು, ಅರ್ಜಿಯಲ್ಲಿನ ಅಂಶಗಳನ್ನು ಆಧರಿಸಿ ಕಾನೂನು ಪ್ರಕಾರ ಸೂಕ್ತ ಆದೇಶ ಮಾಡಬೇಕು ಎಂದು ನಿರ್ದೇಶನ ನೀಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…