ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವೀಸ್ ರಸ್ತೆಯ ದುಸ್ಥಿತಿಯ ವಿರುದ್ಧ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿ ರಸ್ತೆಯನ್ನು ಡೋಸಿಂಗ್ ಮಾಡಿ ಡಾಮಾರು ಹಾಕಿಕೊಡುವಂತೆ ಕೆಎನ್ಆರ್ ಕಂಪೆನಿಯ ಅಽಕಾರಿಗಳನ್ನು ಆಗ್ರಹಿಸಿದರು.
ರಸ್ತೆಯು ಏರು ತಗ್ಗಿನಿಂದ ಕೂಡಿರುವ ಪರಿಣಾಮ ವಾಹನ ಸಾಗುವುದಕ್ಕೆ ತೀರಾ ತೊಂದರೆಯಾಗುತ್ತಿದೆ. ಜತೆಗೆ ಧೂಳುನಿಂದ ಜನರ ಆರೋಗ್ಯ ಕೆಡುತ್ತಿದ್ದು, ನೀರು ಹಾಕಲುಯ ಹೇಳಿದರೆ ಡ್ರೈವರ್ ಇಲ್ಲ, ಟ್ಯಾಂಕರ್ ಇಲ್ಲ ಎಂಬ ಉತ್ತರ ನೀಡುತ್ತೀರಿ ಎಂದು ಅಽಕಾರಿಗಳನ್ನು ತರಾಟೆಗೆತ್ತಿಕೊಂಡರು.
ಕೆಎನ್ಆರ್ ಕಂಪೆನಿಯ ಎಜಿಎಂ ರೋಹಿತ್ ಅವರು ಜನರ ಆಗ್ರಹವನ್ನು ಆಲಿಸಿದರು. ಮುಂದೆ ಕೆಲವೇ ದಿನಗಳಲ್ಲಿ ಮಳೆ ಬರುವುದರಿಂದ ರಸ್ತೆಯನ್ನು ಸಮತಟ್ಟುಗೊಳಿಸಿ ಹೆಚ್ಚಿನ ಮೆಷಿನ್ಗಳನ್ನು ಹಾಕಿ ಶೀಘ್ರ ಡಾಮಾರು ಹಾಕುವ ಕೆಲಸ ಮುಗಿಸುವಂತೆ ಒತ್ತಾಯಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…