ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಹೆಚ್ಚಾಗ್ತಾಯಿರುವ ಕಾಡು ಪ್ರಾಣಿಗಳ ಹಾವಳಿ; ಪರಿಹಾರಕ್ಕೆ ಆಗ್ರಹ

ಉಡುಪಿ: ರೈತರು ತಾವು ಬೆಳೆದ ಬೆಳೆಗಳನ್ನು‌ ಕಾಡು ಪ್ರಾಣಿಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.


ಒಂದೆಡೆ ತಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇನ್ನೊಂದೆಡೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಪರ್ಯಾಯ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಮಂಗ, ಜಿಂಕೆ, ಕಾಡುಹಂದಿ, ನವಿಲು ಮತ್ತು ಕಾಡೆಮ್ಮೆಗಳು ಕೃಷಿ ಭೂಮಿಗಳಿಗೆ ದಾಳಿ ನಡೆಸಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ನಾಶ ಮಾಡುತ್ತಿವೆ. ಕೃಷಿಕರು ಮಂಗಗಳನ್ನು ಭಯಭೀತಗೊಳಿಸಿ ಓಡಿಸಲು ಪರವಾನಿಗೆ ಪಡೆದ ಬಂದೂಕುಗಳನ್ನು ಬಳಸುತ್ತಿದ್ದಾರೆ. ಅದೇ ರೀತಿ ಪ್ರಾಣಿಗಳನ್ನು ಓಡಿಸಲು ಪಟಾಕಿಗಳನ್ನು ಕೂಡ ಬಳಸುತ್ತಿದ್ದಾರೆ. ಆದರೆ, ಇವೆಲ್ಲವೂ ತಾತ್ಕಾಲಿಕ ಪರಿಹಾರಗಳಾಗಿವೆ.
ಯಾವುದೇ ತೊಂದರೆ ಇಲ್ಲದೆ ಪ್ರಾಣಿಗಳನ್ನು ಓಡಿಸಲು ಬಳಸುವ ವಿವಿಧ ತಂತ್ರಗಳು ಹಾಗೂ ಮಾರ್ಗಗಳು ಇದೀಗ ಹಳೆಯದಾಗುತ್ತಿವೆ ಎನ್ನುತ್ತಾರೆ ಕೃಷಿಕರು.
ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ಕೃಷಿ ಮತ್ತು ಜನರ ಮೇಲೆ ದಾಳಿ ನಡೆಸಿದ ಪರಿಣಾಮ ಅಪಾರ ನಷ್ಟಗಳು ಸಂಭವಿಸಿವೆ. ಇದರ ಪರಿಹಾರಕ್ಕಾಗಿ ಮಂಕಿ ಪಾರ್ಕ್‌ ನಿರ್ಮಾಣ ಮಾಡುವ ಪ್ರಸ್ತಾಪ ಇದೆಯಾದರೂ ಸರ್ಕಾರ ಇತ್ತ ಕಡೆ ಗಮನ ಹರಿಸುತ್ತಿಲ್ಲ. ಇನ್ನು ಮುಂದೆಯಾದರೂ ಜನಪ್ರತಿನಿಧಿಗಳು ಇತ್ತ ಕಡೆ ಗಮನ ಹರಿಸಿ ಕೃಷಿಕರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಕೃಷಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!