ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಹೆಚ್ಚಾಗ್ತಾಯಿರುವ ಕಾಡು ಪ್ರಾಣಿಗಳ ಹಾವಳಿ; ಪರಿಹಾರಕ್ಕೆ ಆಗ್ರಹ

ಉಡುಪಿ: ರೈತರು ತಾವು ಬೆಳೆದ ಬೆಳೆಗಳನ್ನು‌ ಕಾಡು ಪ್ರಾಣಿಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.


ಒಂದೆಡೆ ತಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇನ್ನೊಂದೆಡೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಪರ್ಯಾಯ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಮಂಗ, ಜಿಂಕೆ, ಕಾಡುಹಂದಿ, ನವಿಲು ಮತ್ತು ಕಾಡೆಮ್ಮೆಗಳು ಕೃಷಿ ಭೂಮಿಗಳಿಗೆ ದಾಳಿ ನಡೆಸಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ನಾಶ ಮಾಡುತ್ತಿವೆ. ಕೃಷಿಕರು ಮಂಗಗಳನ್ನು ಭಯಭೀತಗೊಳಿಸಿ ಓಡಿಸಲು ಪರವಾನಿಗೆ ಪಡೆದ ಬಂದೂಕುಗಳನ್ನು ಬಳಸುತ್ತಿದ್ದಾರೆ. ಅದೇ ರೀತಿ ಪ್ರಾಣಿಗಳನ್ನು ಓಡಿಸಲು ಪಟಾಕಿಗಳನ್ನು ಕೂಡ ಬಳಸುತ್ತಿದ್ದಾರೆ. ಆದರೆ, ಇವೆಲ್ಲವೂ ತಾತ್ಕಾಲಿಕ ಪರಿಹಾರಗಳಾಗಿವೆ.
ಯಾವುದೇ ತೊಂದರೆ ಇಲ್ಲದೆ ಪ್ರಾಣಿಗಳನ್ನು ಓಡಿಸಲು ಬಳಸುವ ವಿವಿಧ ತಂತ್ರಗಳು ಹಾಗೂ ಮಾರ್ಗಗಳು ಇದೀಗ ಹಳೆಯದಾಗುತ್ತಿವೆ ಎನ್ನುತ್ತಾರೆ ಕೃಷಿಕರು.
ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ಕೃಷಿ ಮತ್ತು ಜನರ ಮೇಲೆ ದಾಳಿ ನಡೆಸಿದ ಪರಿಣಾಮ ಅಪಾರ ನಷ್ಟಗಳು ಸಂಭವಿಸಿವೆ. ಇದರ ಪರಿಹಾರಕ್ಕಾಗಿ ಮಂಕಿ ಪಾರ್ಕ್‌ ನಿರ್ಮಾಣ ಮಾಡುವ ಪ್ರಸ್ತಾಪ ಇದೆಯಾದರೂ ಸರ್ಕಾರ ಇತ್ತ ಕಡೆ ಗಮನ ಹರಿಸುತ್ತಿಲ್ಲ. ಇನ್ನು ಮುಂದೆಯಾದರೂ ಜನಪ್ರತಿನಿಧಿಗಳು ಇತ್ತ ಕಡೆ ಗಮನ ಹರಿಸಿ ಕೃಷಿಕರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಕೃಷಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!