ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಹೆಚ್ಚಾಗ್ತಾಯಿರುವ ಕಾಡು ಪ್ರಾಣಿಗಳ ಹಾವಳಿ; ಪರಿಹಾರಕ್ಕೆ ಆಗ್ರಹ

ಉಡುಪಿ: ರೈತರು ತಾವು ಬೆಳೆದ ಬೆಳೆಗಳನ್ನು‌ ಕಾಡು ಪ್ರಾಣಿಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.


ಒಂದೆಡೆ ತಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇನ್ನೊಂದೆಡೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಪರ್ಯಾಯ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಮಂಗ, ಜಿಂಕೆ, ಕಾಡುಹಂದಿ, ನವಿಲು ಮತ್ತು ಕಾಡೆಮ್ಮೆಗಳು ಕೃಷಿ ಭೂಮಿಗಳಿಗೆ ದಾಳಿ ನಡೆಸಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ನಾಶ ಮಾಡುತ್ತಿವೆ. ಕೃಷಿಕರು ಮಂಗಗಳನ್ನು ಭಯಭೀತಗೊಳಿಸಿ ಓಡಿಸಲು ಪರವಾನಿಗೆ ಪಡೆದ ಬಂದೂಕುಗಳನ್ನು ಬಳಸುತ್ತಿದ್ದಾರೆ. ಅದೇ ರೀತಿ ಪ್ರಾಣಿಗಳನ್ನು ಓಡಿಸಲು ಪಟಾಕಿಗಳನ್ನು ಕೂಡ ಬಳಸುತ್ತಿದ್ದಾರೆ. ಆದರೆ, ಇವೆಲ್ಲವೂ ತಾತ್ಕಾಲಿಕ ಪರಿಹಾರಗಳಾಗಿವೆ.
ಯಾವುದೇ ತೊಂದರೆ ಇಲ್ಲದೆ ಪ್ರಾಣಿಗಳನ್ನು ಓಡಿಸಲು ಬಳಸುವ ವಿವಿಧ ತಂತ್ರಗಳು ಹಾಗೂ ಮಾರ್ಗಗಳು ಇದೀಗ ಹಳೆಯದಾಗುತ್ತಿವೆ ಎನ್ನುತ್ತಾರೆ ಕೃಷಿಕರು.
ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ಕೃಷಿ ಮತ್ತು ಜನರ ಮೇಲೆ ದಾಳಿ ನಡೆಸಿದ ಪರಿಣಾಮ ಅಪಾರ ನಷ್ಟಗಳು ಸಂಭವಿಸಿವೆ. ಇದರ ಪರಿಹಾರಕ್ಕಾಗಿ ಮಂಕಿ ಪಾರ್ಕ್‌ ನಿರ್ಮಾಣ ಮಾಡುವ ಪ್ರಸ್ತಾಪ ಇದೆಯಾದರೂ ಸರ್ಕಾರ ಇತ್ತ ಕಡೆ ಗಮನ ಹರಿಸುತ್ತಿಲ್ಲ. ಇನ್ನು ಮುಂದೆಯಾದರೂ ಜನಪ್ರತಿನಿಧಿಗಳು ಇತ್ತ ಕಡೆ ಗಮನ ಹರಿಸಿ ಕೃಷಿಕರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಕೃಷಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!